Homeಕರ್ನಾಟಕಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷ ಮೂಡಿಸಲು ಯತ್ನಿಸಲಾಗಿದೆ.

- Advertisement -
- Advertisement -

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುಷ್ಕರ್ಮಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಉಪ್ಪಿನಂಗಡಿ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿರುವ ನ್ಯೂ ಅಶ್ವಿನಿ ಟ್ರೇಡರ್ಸ್‌ನ ವರ್ತಕ ಗಣೇಶ್‌ ಬಿ (52) ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ಐಪಿಸಿ ಸೆಕ್ಷನ್‌ 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸಲು ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಸುಳ್ಳು ಸುದ್ದಿ ಹರಡಿದವರು ಯಾರೆಂಬುದು ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆ ‘ನಾನುಗೌರಿ.ಕಾಂ’ಗೆ ಖಚಿತಪಡಿಸಿದೆ. “ಬೇರ್‍ಯಾವುದೇ ಸೆಕ್ಷನ್‌ ದಾಖಲಿಸಲಾಗಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗಣೇಶ್‌ ಬಿ ಅವರು ತಮ್ಮ ದೂರಿನಲ್ಲಿ, “ಉಪ್ಪಿನಂಗಡಿಯಲ್ಲಿ ನ್ಯೂ ಅಶ್ವಿನಿ ಟ್ರೇಡರ್ಸ್ ಎಂಬ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದೇನೆ. ಸಮಾಜದ ಎಲ್ಲಾ ಸಮುದಾಯದ ಮಂದಿಯೂ ನಮ್ಮಲ್ಲಿ  ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಿಡಿಗೇಡಿಗಳು ನನ್ನ ಮಳಿಗೆಯ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ದಿನಾಂಕ 24/03/2022ರ ಗುರುವಾರದಂದು ವಾಟ್ಸಪ್‌‌ ಮೂಲಕ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿ ಸಮಾಜದಲ್ಲಿ ಕ್ಲೇಷ ಮೂಡಿಸಲು ಯತ್ನಿಸಿದ್ದಾರೆ. ಆ ಮೂಲಕ ವ್ಯವಹಾರಕ್ಕೆ ತೊಂದರೆಯೊಡ್ಡುವ ಕೃತ್ಯವನ್ನು ಎಸಗಿದ್ದಾರೆ” ಎಂದು ಗಣೇಶ್ ಆರೋಪಿಸಿದ್ದಾರೆ.

“ಸದರಿ ಸಂದೇಶದಲ್ಲಿ ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದೂ ಉಲ್ಲೇಖಿಸಿ ನನ್ನ ಅಂಗಡಿಯ ಹೆಸರನ್ನೂ ಸೇರಿದಂತೆ 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ, -ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ- ಎಂಬಿತ್ಯಾದಿಯಾಗಿ ಮತೀಯ ದ್ವೇಷದ ವಾಕ್ಯಗಳನ್ನು ರಚಿಸಿ ಸಾಮಾಜಿಕ ತಾಲತಾಣಗಳಲ್ಲಿ ಹರಿಯಬಿಡಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಇದು ಪ್ರಸ್ತುತ ಸನ್ನಿವೇಶದಲ್ಲಿ ಮತೀಯ ಸಂಘರ್ಷವನ್ನು ಉಂಟು ಮಾಡುವ ಹುನ್ನಾರದಿಂದ ನಡೆಸಿದ ಷಡ್ಯಂತ್ರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿಸಿದ ದುಷ್ಕರ್ಮಿಗಳ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ” ಎಂದು ಕೋರಿದ್ದು, ಸುಳ್ಳು ಸುದ್ದಿಯ ಸ್ಕ್ರೀನ್‌ ಶಾಟ್‌ಗಳನ್ನು ದೂರಿನಲ್ಲಿ ಲಗತ್ತಿಸಿದ್ದಾರೆ.

ಉಪ್ಪಿನಂಗಡಿ ವರ್ತಕರು (PC: VarthaBharati)

ಉಪ್ಪಿನಂಗಡಿ ವರ್ತಕರ ಖಂಡನೆ

ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಜರುಗಿಸಬೇಕೆಂದು ಉಪ್ಪಿನಂಗಡಿ ಹಿಂದೂ ವರ್ತಕರು ಆಗ್ರಹಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲಾ ವರ್ತಕರು ಖಂಡಿಸಿದ್ದು, ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್‌ಪಿ ಗಾನಕುಮಾರಿ ಮತ್ತು ಉಪ್ಪಿನಂಗಡಿ ಸಬ್‌ ಇನ್‌ಸ್ಪೆಕ್ಟರ್‌ ಕಾಂಬಳೆ ಅವರನ್ನು ಭೇಟಿಯಾಗಿ ದೂರು ನೀಡಿದೆ” ಎಂದು ವರದಿಯಾಗಿದೆ.

ನಿಯೋಗದಲ್ಲಿ ಯತೀಶ್‌ ಶೆಟ್ಟಿ ಸುವ್ಯ ಕ್ರೀಮ್‌ ಪಾರ್ಲರ್‌, ಸದಾನಂದ ಕಾರ್‌ ಕ್ಲಬ್‌, ಶಿವಪ್ರಸಾದ್ ರಾಮ್‌ ಮೆಡಿಕಲ್ಸ್‌, ಸಂದೀಶ್ ಶೆಟ್ಟಿ ಟಿಫಿನ್ ಹಾಲ್‌, ಪ್ರಕಾಶ್‌ ಮತ್ತು ಸಹೋದರರು ಅಶ್ವಿನಿ ಟ್ರೇಡರ್ಸ್, ಜಗದೀಶ್ ನಾಯಕ್ ಕರಾಯ, ಚೇತನ್‌ ನಾಯಕ್ ಕರಾಯ, ನಿತ್ಯಾನಂದ ಕಿಣಿ ಕರಾಯ, ಜಯರಾಮ್‌ ಅನ್ನಪೂರ್ಣ, ವೆಂಕಟರಮಣ ನಾಯಕ್‌, ಬಿಜ್ರೇಶ್‌ ಬಿ ಡಾಟ್‌ ಹಾಜರಿದ್ದರು.

ಇವರೊಂದಿಗೆ ವರ್ತಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ಡಿಕೋಸ್ತಾ, ಉಪಾಧ್ಯಕ್ಷರಾದ ಶಬೀರ್‌ ಕೆಂಪಿ, ಕಾರ್ಯದರ್ಶಿಗಳಾದ ಅಬ್ದುಲ್‌ ರಹಿಮಾನ್ ಯೂನಿಕ್‌, ಸದಸ್ಯರಾದ ಇರ್ಷಾದ್ ಯು.ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಬ್ದುಲ್‌ ರಹಿಮಾನ್ ಮಠ, ಗ್ರಾಮ ಪಂಚಾಯಿತಿ ಸದಸ್ಯರಾದ ತೌಫೀನ್‌ ಯು.ಟಿ., ಇಬ್ರಾಹಿಂ ಆಚಿ, ಜಲೀಲ್ ಮುಕ್ರಿ, ಉಕ್ಬಾಲ್ ಪಾಂಡೇಲ್‌ ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...