Homeಕರ್ನಾಟಕಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷ ಮೂಡಿಸಲು ಯತ್ನಿಸಲಾಗಿದೆ.

- Advertisement -
- Advertisement -

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುಷ್ಕರ್ಮಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಉಪ್ಪಿನಂಗಡಿ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿರುವ ನ್ಯೂ ಅಶ್ವಿನಿ ಟ್ರೇಡರ್ಸ್‌ನ ವರ್ತಕ ಗಣೇಶ್‌ ಬಿ (52) ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ಐಪಿಸಿ ಸೆಕ್ಷನ್‌ 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸಲು ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಸುಳ್ಳು ಸುದ್ದಿ ಹರಡಿದವರು ಯಾರೆಂಬುದು ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆ ‘ನಾನುಗೌರಿ.ಕಾಂ’ಗೆ ಖಚಿತಪಡಿಸಿದೆ. “ಬೇರ್‍ಯಾವುದೇ ಸೆಕ್ಷನ್‌ ದಾಖಲಿಸಲಾಗಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗಣೇಶ್‌ ಬಿ ಅವರು ತಮ್ಮ ದೂರಿನಲ್ಲಿ, “ಉಪ್ಪಿನಂಗಡಿಯಲ್ಲಿ ನ್ಯೂ ಅಶ್ವಿನಿ ಟ್ರೇಡರ್ಸ್ ಎಂಬ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದೇನೆ. ಸಮಾಜದ ಎಲ್ಲಾ ಸಮುದಾಯದ ಮಂದಿಯೂ ನಮ್ಮಲ್ಲಿ  ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಿಡಿಗೇಡಿಗಳು ನನ್ನ ಮಳಿಗೆಯ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ದಿನಾಂಕ 24/03/2022ರ ಗುರುವಾರದಂದು ವಾಟ್ಸಪ್‌‌ ಮೂಲಕ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿ ಸಮಾಜದಲ್ಲಿ ಕ್ಲೇಷ ಮೂಡಿಸಲು ಯತ್ನಿಸಿದ್ದಾರೆ. ಆ ಮೂಲಕ ವ್ಯವಹಾರಕ್ಕೆ ತೊಂದರೆಯೊಡ್ಡುವ ಕೃತ್ಯವನ್ನು ಎಸಗಿದ್ದಾರೆ” ಎಂದು ಗಣೇಶ್ ಆರೋಪಿಸಿದ್ದಾರೆ.

“ಸದರಿ ಸಂದೇಶದಲ್ಲಿ ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದೂ ಉಲ್ಲೇಖಿಸಿ ನನ್ನ ಅಂಗಡಿಯ ಹೆಸರನ್ನೂ ಸೇರಿದಂತೆ 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ, -ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ- ಎಂಬಿತ್ಯಾದಿಯಾಗಿ ಮತೀಯ ದ್ವೇಷದ ವಾಕ್ಯಗಳನ್ನು ರಚಿಸಿ ಸಾಮಾಜಿಕ ತಾಲತಾಣಗಳಲ್ಲಿ ಹರಿಯಬಿಡಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಇದು ಪ್ರಸ್ತುತ ಸನ್ನಿವೇಶದಲ್ಲಿ ಮತೀಯ ಸಂಘರ್ಷವನ್ನು ಉಂಟು ಮಾಡುವ ಹುನ್ನಾರದಿಂದ ನಡೆಸಿದ ಷಡ್ಯಂತ್ರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿಸಿದ ದುಷ್ಕರ್ಮಿಗಳ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ” ಎಂದು ಕೋರಿದ್ದು, ಸುಳ್ಳು ಸುದ್ದಿಯ ಸ್ಕ್ರೀನ್‌ ಶಾಟ್‌ಗಳನ್ನು ದೂರಿನಲ್ಲಿ ಲಗತ್ತಿಸಿದ್ದಾರೆ.

ಉಪ್ಪಿನಂಗಡಿ ವರ್ತಕರು (PC: VarthaBharati)

ಉಪ್ಪಿನಂಗಡಿ ವರ್ತಕರ ಖಂಡನೆ

ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಜರುಗಿಸಬೇಕೆಂದು ಉಪ್ಪಿನಂಗಡಿ ಹಿಂದೂ ವರ್ತಕರು ಆಗ್ರಹಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲಾ ವರ್ತಕರು ಖಂಡಿಸಿದ್ದು, ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್‌ಪಿ ಗಾನಕುಮಾರಿ ಮತ್ತು ಉಪ್ಪಿನಂಗಡಿ ಸಬ್‌ ಇನ್‌ಸ್ಪೆಕ್ಟರ್‌ ಕಾಂಬಳೆ ಅವರನ್ನು ಭೇಟಿಯಾಗಿ ದೂರು ನೀಡಿದೆ” ಎಂದು ವರದಿಯಾಗಿದೆ.

ನಿಯೋಗದಲ್ಲಿ ಯತೀಶ್‌ ಶೆಟ್ಟಿ ಸುವ್ಯ ಕ್ರೀಮ್‌ ಪಾರ್ಲರ್‌, ಸದಾನಂದ ಕಾರ್‌ ಕ್ಲಬ್‌, ಶಿವಪ್ರಸಾದ್ ರಾಮ್‌ ಮೆಡಿಕಲ್ಸ್‌, ಸಂದೀಶ್ ಶೆಟ್ಟಿ ಟಿಫಿನ್ ಹಾಲ್‌, ಪ್ರಕಾಶ್‌ ಮತ್ತು ಸಹೋದರರು ಅಶ್ವಿನಿ ಟ್ರೇಡರ್ಸ್, ಜಗದೀಶ್ ನಾಯಕ್ ಕರಾಯ, ಚೇತನ್‌ ನಾಯಕ್ ಕರಾಯ, ನಿತ್ಯಾನಂದ ಕಿಣಿ ಕರಾಯ, ಜಯರಾಮ್‌ ಅನ್ನಪೂರ್ಣ, ವೆಂಕಟರಮಣ ನಾಯಕ್‌, ಬಿಜ್ರೇಶ್‌ ಬಿ ಡಾಟ್‌ ಹಾಜರಿದ್ದರು.

ಇವರೊಂದಿಗೆ ವರ್ತಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ಡಿಕೋಸ್ತಾ, ಉಪಾಧ್ಯಕ್ಷರಾದ ಶಬೀರ್‌ ಕೆಂಪಿ, ಕಾರ್ಯದರ್ಶಿಗಳಾದ ಅಬ್ದುಲ್‌ ರಹಿಮಾನ್ ಯೂನಿಕ್‌, ಸದಸ್ಯರಾದ ಇರ್ಷಾದ್ ಯು.ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಬ್ದುಲ್‌ ರಹಿಮಾನ್ ಮಠ, ಗ್ರಾಮ ಪಂಚಾಯಿತಿ ಸದಸ್ಯರಾದ ತೌಫೀನ್‌ ಯು.ಟಿ., ಇಬ್ರಾಹಿಂ ಆಚಿ, ಜಲೀಲ್ ಮುಕ್ರಿ, ಉಕ್ಬಾಲ್ ಪಾಂಡೇಲ್‌ ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...