Homeಕರ್ನಾಟಕಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರಿನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಟಾಟಾ ಏಸ್ ಗಾಡಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದ ಘಟನೆ ಜೂನ್ 29ಕ್ಕೆ ನಡೆದಿತ್ತು.‌ ಪೊಲೀಸರ ಬೇಜವಾಬ್ದಾರಿಯಿಂದ ದುರ್ಘಟನೆ ನಡೆದಿದೆ ಎಂದು ಆರೋಪಿಸಿ, ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದರು.

ರಾಮಕುಂಜ ಕ್ರಾಸ್ ಬಳಿ ತಾತ್ಕಾಲಿಕವಾಗಿ ನಿರ್ಮಿಸಿದ ಪೊಲೀಸ್‌ ಚೌಕಿಯನ್ನು ಕೆಡವಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದಾದ ಬಳಿಕ ಕಡಬ ಪೊಲೀಸರು 39 ಕ್ಕೂ ಅಧಿಕ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡು ಸುಲಿಗೆಗೆ ಇಳಿದಿದ್ದಾರೆ, ಅಮಾಯಕರ ಮನೆಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜೂನ್ 29 ರಂದು ಆತೂರು ಬೈಲು ನಿವಾಸಿ ಹಾರಿಸ್ (33), ತನ್ನ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಡೆದಿದ್ದರು. ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದರು. ಇದರಿಂದಾಗಿ ಮೃತನ ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನ ಹೀಗೆ ಏಕಾಏಕಿ ಬರಲು ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ದಿಕ್ಕಿನಲ್ಲಿ ಸನ್ನೆ ಮಾಡಿದ್ದು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಘಟನೆ ಕುರಿತು, ಪೊಲೀಸ್ ಚೆಕ್‌ಪೋಸ್ಟ್‌ ಧ್ವಂಸ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಚಿನ್ನಪ್ಪ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರ ಮೇಲೆ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೆಸರು ಹೇಳಲು ಇಚ್ಛಿಸದ ಸ್ಥಳೀಯರೊಬ್ಬರು,  “ಅದು ತಾತ್ಕಾಲಿಕ ಚೆಕ್ ಪೋಸ್ಟ್ ಆಗಿತ್ತು. ಪೊಲೀಸರು ಅಲ್ಲಿ ಕುಳಿತು ಕೆಲಸ ಕಾರ್ಯಗಳಿಗೆ ಹೋಗುವ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದರು. ಹ್ಯಾರಿಸ್ ಘಟನೆಯಿಂದ ಜನರ ಕೋಪ ಹೆಚ್ಚಾಗಿ ಚೆಕ್ ಪೋಸ್ಟ್ ಧ್ವಂಸ ಮಾಡಿದ್ದಾರೆ. ಆದರೆ, ಇದನ್ನೇ ನೆಪವಾಗಿಸಿ ಪೊಲೀಸರು ಅನೇಕ ಹೋರಾಟಗಾರರು, ಸಂಘಟನೆಯ ಸದಸ್ಯರು, ಗ್ರಾಮಪಂಚಾಯಿತಿ ಸದಸ್ಯರು ಮತ್ತು ಅಮಾಯಕ ಯುವಕರನ್ನು ಗುರಿಯಾಗಿಸಿ 39 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗಳಿಗೆ ನುಗ್ಗಿ ಯುವಕರನ್ನು ಎಳೆದೊಯ್ಯುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ನಿನ್ನ ಹೆಸರಿದೆ ಎಂದು ಬೆದರಿಸಿ ಹಣ ನೀಡುವಂತೆ ಬೆದರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಅಮಾಯಕ ಯುವಕರ ಮೇಲೆ ಪ್ರಕರಣ ದಾಖಲಿಸಿದ್ದು, ನಿನ್ನೆ ಮಧ್ಯರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವೆಸಗಿದ ಘಟನೆ  ನಡೆದಿದೆ. ಮನೆಗೆ ನುಗ್ಗಿದ 7 ರಿಂದ 9 ಮಂದಿ ಇದ್ದ ಪೋಲೀಸ್ ತಂಡ ಮನೆಯ ವಸ್ತುಗಳನ್ನು ನಾಶ ಪಡಿಸಿ, ಮಹಿಳೆಯರಿಗೆ ಗನ್ ತೋರಿಸಿ, ನಿಮ್ಮ ಮಾನ ಹರಾಜು ಮಾಡುತ್ತೇವೆ ಎಂದು ಬೆದರಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಜುಲೈ 6 ರಂದು ತಡರಾತ್ರಿ ಕಡಬ ಪೊಲೀಸರು ಮಾನಸಿಕ ಅಸ್ವಸ್ಥ ಇರುವ ಮನೆಗೂ ನುಗ್ಗಿ ತಪಾಸಣೆ ನಡೆಸುವ ಉದ್ದೇಶವಾದರೂ ಏನು..? ಕೋವಿಡ್ ಪರಿಸ್ಥಿತಿಯಲ್ಲೂ ಇಂತಹ ಕ್ರೌರ್ಯ ನಡೆಸಲು ಪೊಲೀಸರಿಗೆ ಮನಸ್ಸಾದರೂ ಹೇಗೆ ಬಂತು..?  ಕಾನೂನು ನೀತಿ ನಿಯಮ ಎಂಬುದು ಜನಸಾಮಾನ್ಯರಿಗೆ ಮಾತ್ರವೇ..? ಇದು ಕಡಬ ಪೊಲೀಸರಿಗೆ ಅನ್ವಯ ಆಗುವುದಿಲ್ಲವೇ..?  ಮಕ್ಕಳು, ವೃದ್ಧರು, ಮಹಿಳೆಯರು ಇರುವ ಮನೆಗೆ ಬಾಗಿಲು ಮುರಿದು ನುಗ್ಗುವಾಗ ಇವರಿಗೆ ತಮ್ಮ ತಮ್ಮ ಮನೆಯವರ ನೆನಪಾಗುವುದಿಲ್ಲವೇ?  ಕೊರೊನಾವು ಜಗತ್ತಿಗೆ ಮನುಷ್ಯತ್ವದ ಪಾಠ ಕಲಿಸಿಬಿಟ್ಟಿದೆ. ಆದರೆ ಕಡಬ ಪೊಲೀಸರು ಇನ್ನೂ ಪಾಠ ಕಲಿತಿಲ್ಲ. ಮಹಿಳೆಯರ ಕಣ್ಣೀರಶಾಪ ಒಂದಲ್ಲ ಒಂದು ದಿನ ತಟ್ಟೇ ತಟ್ಟುತ್ತದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರ ಗೂಂಡಾ ವರ್ತನೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದು, ಇದರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...