Homeಕರ್ನಾಟಕಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರಿನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಟಾಟಾ ಏಸ್ ಗಾಡಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದ ಘಟನೆ ಜೂನ್ 29ಕ್ಕೆ ನಡೆದಿತ್ತು.‌ ಪೊಲೀಸರ ಬೇಜವಾಬ್ದಾರಿಯಿಂದ ದುರ್ಘಟನೆ ನಡೆದಿದೆ ಎಂದು ಆರೋಪಿಸಿ, ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದರು.

ರಾಮಕುಂಜ ಕ್ರಾಸ್ ಬಳಿ ತಾತ್ಕಾಲಿಕವಾಗಿ ನಿರ್ಮಿಸಿದ ಪೊಲೀಸ್‌ ಚೌಕಿಯನ್ನು ಕೆಡವಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದಾದ ಬಳಿಕ ಕಡಬ ಪೊಲೀಸರು 39 ಕ್ಕೂ ಅಧಿಕ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡು ಸುಲಿಗೆಗೆ ಇಳಿದಿದ್ದಾರೆ, ಅಮಾಯಕರ ಮನೆಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜೂನ್ 29 ರಂದು ಆತೂರು ಬೈಲು ನಿವಾಸಿ ಹಾರಿಸ್ (33), ತನ್ನ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಡೆದಿದ್ದರು. ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದರು. ಇದರಿಂದಾಗಿ ಮೃತನ ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನ ಹೀಗೆ ಏಕಾಏಕಿ ಬರಲು ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ದಿಕ್ಕಿನಲ್ಲಿ ಸನ್ನೆ ಮಾಡಿದ್ದು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಘಟನೆ ಕುರಿತು, ಪೊಲೀಸ್ ಚೆಕ್‌ಪೋಸ್ಟ್‌ ಧ್ವಂಸ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಚಿನ್ನಪ್ಪ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರ ಮೇಲೆ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೆಸರು ಹೇಳಲು ಇಚ್ಛಿಸದ ಸ್ಥಳೀಯರೊಬ್ಬರು,  “ಅದು ತಾತ್ಕಾಲಿಕ ಚೆಕ್ ಪೋಸ್ಟ್ ಆಗಿತ್ತು. ಪೊಲೀಸರು ಅಲ್ಲಿ ಕುಳಿತು ಕೆಲಸ ಕಾರ್ಯಗಳಿಗೆ ಹೋಗುವ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದರು. ಹ್ಯಾರಿಸ್ ಘಟನೆಯಿಂದ ಜನರ ಕೋಪ ಹೆಚ್ಚಾಗಿ ಚೆಕ್ ಪೋಸ್ಟ್ ಧ್ವಂಸ ಮಾಡಿದ್ದಾರೆ. ಆದರೆ, ಇದನ್ನೇ ನೆಪವಾಗಿಸಿ ಪೊಲೀಸರು ಅನೇಕ ಹೋರಾಟಗಾರರು, ಸಂಘಟನೆಯ ಸದಸ್ಯರು, ಗ್ರಾಮಪಂಚಾಯಿತಿ ಸದಸ್ಯರು ಮತ್ತು ಅಮಾಯಕ ಯುವಕರನ್ನು ಗುರಿಯಾಗಿಸಿ 39 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗಳಿಗೆ ನುಗ್ಗಿ ಯುವಕರನ್ನು ಎಳೆದೊಯ್ಯುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ನಿನ್ನ ಹೆಸರಿದೆ ಎಂದು ಬೆದರಿಸಿ ಹಣ ನೀಡುವಂತೆ ಬೆದರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಅಮಾಯಕ ಯುವಕರ ಮೇಲೆ ಪ್ರಕರಣ ದಾಖಲಿಸಿದ್ದು, ನಿನ್ನೆ ಮಧ್ಯರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವೆಸಗಿದ ಘಟನೆ  ನಡೆದಿದೆ. ಮನೆಗೆ ನುಗ್ಗಿದ 7 ರಿಂದ 9 ಮಂದಿ ಇದ್ದ ಪೋಲೀಸ್ ತಂಡ ಮನೆಯ ವಸ್ತುಗಳನ್ನು ನಾಶ ಪಡಿಸಿ, ಮಹಿಳೆಯರಿಗೆ ಗನ್ ತೋರಿಸಿ, ನಿಮ್ಮ ಮಾನ ಹರಾಜು ಮಾಡುತ್ತೇವೆ ಎಂದು ಬೆದರಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಜುಲೈ 6 ರಂದು ತಡರಾತ್ರಿ ಕಡಬ ಪೊಲೀಸರು ಮಾನಸಿಕ ಅಸ್ವಸ್ಥ ಇರುವ ಮನೆಗೂ ನುಗ್ಗಿ ತಪಾಸಣೆ ನಡೆಸುವ ಉದ್ದೇಶವಾದರೂ ಏನು..? ಕೋವಿಡ್ ಪರಿಸ್ಥಿತಿಯಲ್ಲೂ ಇಂತಹ ಕ್ರೌರ್ಯ ನಡೆಸಲು ಪೊಲೀಸರಿಗೆ ಮನಸ್ಸಾದರೂ ಹೇಗೆ ಬಂತು..?  ಕಾನೂನು ನೀತಿ ನಿಯಮ ಎಂಬುದು ಜನಸಾಮಾನ್ಯರಿಗೆ ಮಾತ್ರವೇ..? ಇದು ಕಡಬ ಪೊಲೀಸರಿಗೆ ಅನ್ವಯ ಆಗುವುದಿಲ್ಲವೇ..?  ಮಕ್ಕಳು, ವೃದ್ಧರು, ಮಹಿಳೆಯರು ಇರುವ ಮನೆಗೆ ಬಾಗಿಲು ಮುರಿದು ನುಗ್ಗುವಾಗ ಇವರಿಗೆ ತಮ್ಮ ತಮ್ಮ ಮನೆಯವರ ನೆನಪಾಗುವುದಿಲ್ಲವೇ?  ಕೊರೊನಾವು ಜಗತ್ತಿಗೆ ಮನುಷ್ಯತ್ವದ ಪಾಠ ಕಲಿಸಿಬಿಟ್ಟಿದೆ. ಆದರೆ ಕಡಬ ಪೊಲೀಸರು ಇನ್ನೂ ಪಾಠ ಕಲಿತಿಲ್ಲ. ಮಹಿಳೆಯರ ಕಣ್ಣೀರಶಾಪ ಒಂದಲ್ಲ ಒಂದು ದಿನ ತಟ್ಟೇ ತಟ್ಟುತ್ತದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರ ಗೂಂಡಾ ವರ್ತನೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದು, ಇದರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...