Homeಕರ್ನಾಟಕಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರಿನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಟಾಟಾ ಏಸ್ ಗಾಡಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದ ಘಟನೆ ಜೂನ್ 29ಕ್ಕೆ ನಡೆದಿತ್ತು.‌ ಪೊಲೀಸರ ಬೇಜವಾಬ್ದಾರಿಯಿಂದ ದುರ್ಘಟನೆ ನಡೆದಿದೆ ಎಂದು ಆರೋಪಿಸಿ, ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದರು.

ರಾಮಕುಂಜ ಕ್ರಾಸ್ ಬಳಿ ತಾತ್ಕಾಲಿಕವಾಗಿ ನಿರ್ಮಿಸಿದ ಪೊಲೀಸ್‌ ಚೌಕಿಯನ್ನು ಕೆಡವಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದಾದ ಬಳಿಕ ಕಡಬ ಪೊಲೀಸರು 39 ಕ್ಕೂ ಅಧಿಕ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡು ಸುಲಿಗೆಗೆ ಇಳಿದಿದ್ದಾರೆ, ಅಮಾಯಕರ ಮನೆಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜೂನ್ 29 ರಂದು ಆತೂರು ಬೈಲು ನಿವಾಸಿ ಹಾರಿಸ್ (33), ತನ್ನ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಡೆದಿದ್ದರು. ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದರು. ಇದರಿಂದಾಗಿ ಮೃತನ ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನ ಹೀಗೆ ಏಕಾಏಕಿ ಬರಲು ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ದಿಕ್ಕಿನಲ್ಲಿ ಸನ್ನೆ ಮಾಡಿದ್ದು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಘಟನೆ ಕುರಿತು, ಪೊಲೀಸ್ ಚೆಕ್‌ಪೋಸ್ಟ್‌ ಧ್ವಂಸ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಚಿನ್ನಪ್ಪ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರ ಮೇಲೆ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೆಸರು ಹೇಳಲು ಇಚ್ಛಿಸದ ಸ್ಥಳೀಯರೊಬ್ಬರು,  “ಅದು ತಾತ್ಕಾಲಿಕ ಚೆಕ್ ಪೋಸ್ಟ್ ಆಗಿತ್ತು. ಪೊಲೀಸರು ಅಲ್ಲಿ ಕುಳಿತು ಕೆಲಸ ಕಾರ್ಯಗಳಿಗೆ ಹೋಗುವ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದರು. ಹ್ಯಾರಿಸ್ ಘಟನೆಯಿಂದ ಜನರ ಕೋಪ ಹೆಚ್ಚಾಗಿ ಚೆಕ್ ಪೋಸ್ಟ್ ಧ್ವಂಸ ಮಾಡಿದ್ದಾರೆ. ಆದರೆ, ಇದನ್ನೇ ನೆಪವಾಗಿಸಿ ಪೊಲೀಸರು ಅನೇಕ ಹೋರಾಟಗಾರರು, ಸಂಘಟನೆಯ ಸದಸ್ಯರು, ಗ್ರಾಮಪಂಚಾಯಿತಿ ಸದಸ್ಯರು ಮತ್ತು ಅಮಾಯಕ ಯುವಕರನ್ನು ಗುರಿಯಾಗಿಸಿ 39 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗಳಿಗೆ ನುಗ್ಗಿ ಯುವಕರನ್ನು ಎಳೆದೊಯ್ಯುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ನಿನ್ನ ಹೆಸರಿದೆ ಎಂದು ಬೆದರಿಸಿ ಹಣ ನೀಡುವಂತೆ ಬೆದರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಅಮಾಯಕ ಯುವಕರ ಮೇಲೆ ಪ್ರಕರಣ ದಾಖಲಿಸಿದ್ದು, ನಿನ್ನೆ ಮಧ್ಯರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವೆಸಗಿದ ಘಟನೆ  ನಡೆದಿದೆ. ಮನೆಗೆ ನುಗ್ಗಿದ 7 ರಿಂದ 9 ಮಂದಿ ಇದ್ದ ಪೋಲೀಸ್ ತಂಡ ಮನೆಯ ವಸ್ತುಗಳನ್ನು ನಾಶ ಪಡಿಸಿ, ಮಹಿಳೆಯರಿಗೆ ಗನ್ ತೋರಿಸಿ, ನಿಮ್ಮ ಮಾನ ಹರಾಜು ಮಾಡುತ್ತೇವೆ ಎಂದು ಬೆದರಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಜುಲೈ 6 ರಂದು ತಡರಾತ್ರಿ ಕಡಬ ಪೊಲೀಸರು ಮಾನಸಿಕ ಅಸ್ವಸ್ಥ ಇರುವ ಮನೆಗೂ ನುಗ್ಗಿ ತಪಾಸಣೆ ನಡೆಸುವ ಉದ್ದೇಶವಾದರೂ ಏನು..? ಕೋವಿಡ್ ಪರಿಸ್ಥಿತಿಯಲ್ಲೂ ಇಂತಹ ಕ್ರೌರ್ಯ ನಡೆಸಲು ಪೊಲೀಸರಿಗೆ ಮನಸ್ಸಾದರೂ ಹೇಗೆ ಬಂತು..?  ಕಾನೂನು ನೀತಿ ನಿಯಮ ಎಂಬುದು ಜನಸಾಮಾನ್ಯರಿಗೆ ಮಾತ್ರವೇ..? ಇದು ಕಡಬ ಪೊಲೀಸರಿಗೆ ಅನ್ವಯ ಆಗುವುದಿಲ್ಲವೇ..?  ಮಕ್ಕಳು, ವೃದ್ಧರು, ಮಹಿಳೆಯರು ಇರುವ ಮನೆಗೆ ಬಾಗಿಲು ಮುರಿದು ನುಗ್ಗುವಾಗ ಇವರಿಗೆ ತಮ್ಮ ತಮ್ಮ ಮನೆಯವರ ನೆನಪಾಗುವುದಿಲ್ಲವೇ?  ಕೊರೊನಾವು ಜಗತ್ತಿಗೆ ಮನುಷ್ಯತ್ವದ ಪಾಠ ಕಲಿಸಿಬಿಟ್ಟಿದೆ. ಆದರೆ ಕಡಬ ಪೊಲೀಸರು ಇನ್ನೂ ಪಾಠ ಕಲಿತಿಲ್ಲ. ಮಹಿಳೆಯರ ಕಣ್ಣೀರಶಾಪ ಒಂದಲ್ಲ ಒಂದು ದಿನ ತಟ್ಟೇ ತಟ್ಟುತ್ತದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರ ಗೂಂಡಾ ವರ್ತನೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದು, ಇದರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...