Homeಕರ್ನಾಟಕಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಅಮಾಯಕರ ಮೇಲಿನ ಕೇಸ್ ಹಿಂಪಡೆದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ: ಪಿಎಫ್‌ಐ ಆಗ್ರಹ

- Advertisement -
- Advertisement -

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಬರ್ಬರವಾಗಿ ಪೊಲೀಸರು ಲಾಠಿಚಾರ್ಚ್ ನಡೆಸಿದ್ದು ಪೊಲೀಸರ ಕೃತ್ಯ ಖಂಡನೀಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

ಪಾಪ್ಯುಲರ್‌ ಫ್ರಂಟ್‌ನ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದು, ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದು ಧರಣಿ ಕುಳಿತ್ತಿದ್ದರು ಎಂದು ಮುಖಂಡರು ತಿಳಿಸಿದ್ದಾರೆ.

ಕತ್ತಲಾವರಿಸಿದರೂ ಪ್ರತಿಭಟನಕಾರರು ಅಲ್ಲಿಂದ ಕದಲದೇ ಇದ್ದಾಗ ರಾತ್ರಿ ಸುಮಾರು 7ರ ವೇಳೆಗೆ ಓರ್ವ ನಾಯಕರನ್ನು ಬಿಡುಗಡೆಗೊಳಿಸಿದ್ದರು. ಇನ್ನಿಬ್ಬರನ್ನು ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದರು. ಆದರೆ ತುಂಬಾ ಸಮಯದ ನಂತರವೂ ಅವರನ್ನು ಬಿಡುಗಡೆಗೊಳಿಸುವ ಲಕ್ಷಣ ಕಂಡು ಬರಲಿಲ್ಲ. ಅವರಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಸೂಚನೆ ಕಂಡು ಬಂದಾಗ, ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಮತ್ತೇ ಪ್ರತಿಭಟನೆಯನ್ನು ಮುಂದುವರಿಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ಪೊಲೀಸರ ರಾಕ್ಷಸೀಯ ವರ್ತನೆ ಖಂಡನಾರ್ಹ. ಬರ್ಬರ ಲಾಠಿಚಾರ್ಜ್‌‌ನಿಂದಾಗಿ ಪ್ರತಿಭಟನಕಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಮುಸ್ಲಿಮರ ಧಾರ್ಮಿಕ ಗುರು ಸೈಯ್ಯದ್ ಆತೂರ್ ತಂಗಳ್ರವರ ತಲೆಗೆ ಗಂಭೀರ ಗಾಯವಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಲಾಠಿ ಏಟಿಗೆ ಯುವಕನೋರ್ವ ಪ್ರಜ್ಞೆ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದ ಕರುಣಾಜನಕ ದೃಶ್ಯವೂ ಕಂಡು ಬಂತು. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 40ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರು ಆ್ಯಂಬುಲೆನ್ಸ್ ಮೇಲೆಯೂ ಲಾಠಿ ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೇ ವೇಳೆ ಆ್ಯಂಬುಲೆನ್ಸ್‌ ಒಂದನ್ನು ಠಾಣೆ ಬಳಿ ತಡೆ ಹಿಡಿದಿದ್ದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ತೀವ್ರ ಅಡಚಣೆ ಉಂಟು ಮಾಡಿದ್ದರು. ಈ ಮಧ್ಯೆ, ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದ ನಾಯಕರ ಮೇಲೆಯೂ ಲಾಠಿ ಬೀಸಿ ಉದ್ಧಟತನದಿಂದ ವರ್ತಿಸಲಾಗಿದೆ ಎಂದು ದೂರಿದ್ದಾರೆ.

ಬೆಳಿಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರ ಬೆದರಿಕೆ, ಪ್ರಚೋದನೆಯ ಹೊರತಾಗಿಯೂ ಪ್ರತಿಭಟನಕಾರರು ರಾತ್ರಿಯಾದರೂ ಸಂಯಮ ಕಳೆದುಕೊಂಡಿರಲಿಲ್ಲ. ಆದರೆ ಸುಮಾರು 9:30ರ ವೇಳೆಗೆ ಪೊಲೀಸರು ಹಿಂಬದಿಯಿಂದ ಏಕಾಏಕೀ ಲಾಠಿ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಬರ್ಬರವಾಗಿ ಥಳಿಸಿದ್ದಾರೆ. ಲಾಠಿಚಾರ್ಜ್‌ನಿಂದ ಗಾಯಗೊಂಡವರ ಪೈಕಿ ಬಹುಪಾಲು ಜನರಿಗೆ ತಲೆಗೆ ಪೆಟ್ಟು ಬಿದ್ದಿರುವುದು ಪೊಲೀಸರ ಪ್ರತೀಕಾರದ ಮನೋಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ತಮ್ಮ ದುಷ್ಕೃತ್ಯವನ್ನು ಮರೆಮಾಚಲು ಪೊಲೀಸರು ಎಂದಿನಂತೆ ತಮ್ಮ ಮೇಲೆ ಹಲ್ಲೆ ನಡೆಸಿರುವ ಕಟ್ಟು ಕಥೆಯನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆದಾಗ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವುದು ಪೊಲೀಸರ ಕರ್ತವ್ಯ. ಆದರೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರವೃತ್ತಿ ಆತಂಕಕಾರಿಯಾಗಿದೆ. ಘಟನೆಯ ಆರೋಪಿಗಳು ಪತ್ತೆಯಾಗಿಲ್ಲ ಎಂಬ ಕಾರಣಕ್ಕೆ ಇದೀಗ ಅಮಾಯಕರನ್ನು ಹಿಡಿದು ಪೊಲೀಸರು ಕೈತೊಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ನೆಲದ ಕಾನೂನನ್ನು ಗೌರವಿಸುತ್ತದೆ ಮತ್ತು ಪೊಲೀಸರ ತನಿಖೆಗೂ ಸಹಕರಿಸುತ್ತದೆ. ಆದರೆ ಘಟನೆಗೆ ಸಂಬಂಧಪಡದ ಅಮಾಯಕರನ್ನು ಸಿಲುಕಿಸಿ ಪ್ರಕರಣ ದಾಖಲಿಸುವ ಅನ್ಯಾಯದ ಕ್ರಮಕ್ಕೆ ಯಾವತ್ತೂ ಅವಕಾಶ ನೀಡುವುದಿಲ್ಲ. ನಿನ್ನೆ ನಡೆದ ಪ್ರತಿಭಟನೆಯೂ ಇದೇ ನಿಲುವಿನ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ವಿನಾ ಕಾರಣ ಲಾಠಿ ಚಾರ್ಜ್ ನಡೆಸಿ ಹಲವು ಮಂದಿ ಗಂಭೀರ ಗಾಯಗೊಳ್ಳಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್‌‌ಗೆ ಆದೇಶ ನೀಡಿದ ಅಧಿಕಾರಿಯನ್ನು ಪೊಲೀಸ್ ಇಲಾಖೆ ಕೂಡಲೇ ಅಮಾನತುಪಡಿಸಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕು. ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಇಬ್ಬರ ಮೇಲೆ ಇದೀಗ ಸುಳ್ಳು ಕೇಸು ಜಡಿಯಲಾಗಿದ್ದು, ಈ ಸುಳ್ಳು ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು. ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಪ್ರತಿಭಟನಕಾರರನ್ನೂ ಬೇಷರತ್ ಆಗಿ ಬಿಡುಗಡೆಗೊಳಿಸಬೇಕು. ಪೊಲೀಸರು ಯಾರದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಅವರು ಕಾನೂನಿನ ಘನತೆ, ಪಾವಿತ್ರ್ಯಾತೆಯನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸೆಂಬರ್ 17ರ ಶುಕ್ರವಾರದಂದು ಮಂಗಳೂರಿನಲ್ಲಿ ಎಸ್‌‌ಪಿ ಆಫೀಸ್ ಎದುರು ಮಾರ್ಚ್ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಪ್ಯುಲರ್‌ ಫ್ರಂಟ್‌‌ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಪುತ್ತೂರು ತಾಲ್ಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...