Homeಕರ್ನಾಟಕಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಅಮಾಯಕರ ಮೇಲಿನ ಕೇಸ್ ಹಿಂಪಡೆದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ: ಪಿಎಫ್‌ಐ ಆಗ್ರಹ

- Advertisement -
- Advertisement -

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಬರ್ಬರವಾಗಿ ಪೊಲೀಸರು ಲಾಠಿಚಾರ್ಚ್ ನಡೆಸಿದ್ದು ಪೊಲೀಸರ ಕೃತ್ಯ ಖಂಡನೀಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

ಪಾಪ್ಯುಲರ್‌ ಫ್ರಂಟ್‌ನ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದು, ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದು ಧರಣಿ ಕುಳಿತ್ತಿದ್ದರು ಎಂದು ಮುಖಂಡರು ತಿಳಿಸಿದ್ದಾರೆ.

ಕತ್ತಲಾವರಿಸಿದರೂ ಪ್ರತಿಭಟನಕಾರರು ಅಲ್ಲಿಂದ ಕದಲದೇ ಇದ್ದಾಗ ರಾತ್ರಿ ಸುಮಾರು 7ರ ವೇಳೆಗೆ ಓರ್ವ ನಾಯಕರನ್ನು ಬಿಡುಗಡೆಗೊಳಿಸಿದ್ದರು. ಇನ್ನಿಬ್ಬರನ್ನು ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದರು. ಆದರೆ ತುಂಬಾ ಸಮಯದ ನಂತರವೂ ಅವರನ್ನು ಬಿಡುಗಡೆಗೊಳಿಸುವ ಲಕ್ಷಣ ಕಂಡು ಬರಲಿಲ್ಲ. ಅವರಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಸೂಚನೆ ಕಂಡು ಬಂದಾಗ, ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಮತ್ತೇ ಪ್ರತಿಭಟನೆಯನ್ನು ಮುಂದುವರಿಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ಪೊಲೀಸರ ರಾಕ್ಷಸೀಯ ವರ್ತನೆ ಖಂಡನಾರ್ಹ. ಬರ್ಬರ ಲಾಠಿಚಾರ್ಜ್‌‌ನಿಂದಾಗಿ ಪ್ರತಿಭಟನಕಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಮುಸ್ಲಿಮರ ಧಾರ್ಮಿಕ ಗುರು ಸೈಯ್ಯದ್ ಆತೂರ್ ತಂಗಳ್ರವರ ತಲೆಗೆ ಗಂಭೀರ ಗಾಯವಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಲಾಠಿ ಏಟಿಗೆ ಯುವಕನೋರ್ವ ಪ್ರಜ್ಞೆ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದ ಕರುಣಾಜನಕ ದೃಶ್ಯವೂ ಕಂಡು ಬಂತು. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 40ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರು ಆ್ಯಂಬುಲೆನ್ಸ್ ಮೇಲೆಯೂ ಲಾಠಿ ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೇ ವೇಳೆ ಆ್ಯಂಬುಲೆನ್ಸ್‌ ಒಂದನ್ನು ಠಾಣೆ ಬಳಿ ತಡೆ ಹಿಡಿದಿದ್ದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ತೀವ್ರ ಅಡಚಣೆ ಉಂಟು ಮಾಡಿದ್ದರು. ಈ ಮಧ್ಯೆ, ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದ ನಾಯಕರ ಮೇಲೆಯೂ ಲಾಠಿ ಬೀಸಿ ಉದ್ಧಟತನದಿಂದ ವರ್ತಿಸಲಾಗಿದೆ ಎಂದು ದೂರಿದ್ದಾರೆ.

ಬೆಳಿಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರ ಬೆದರಿಕೆ, ಪ್ರಚೋದನೆಯ ಹೊರತಾಗಿಯೂ ಪ್ರತಿಭಟನಕಾರರು ರಾತ್ರಿಯಾದರೂ ಸಂಯಮ ಕಳೆದುಕೊಂಡಿರಲಿಲ್ಲ. ಆದರೆ ಸುಮಾರು 9:30ರ ವೇಳೆಗೆ ಪೊಲೀಸರು ಹಿಂಬದಿಯಿಂದ ಏಕಾಏಕೀ ಲಾಠಿ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಬರ್ಬರವಾಗಿ ಥಳಿಸಿದ್ದಾರೆ. ಲಾಠಿಚಾರ್ಜ್‌ನಿಂದ ಗಾಯಗೊಂಡವರ ಪೈಕಿ ಬಹುಪಾಲು ಜನರಿಗೆ ತಲೆಗೆ ಪೆಟ್ಟು ಬಿದ್ದಿರುವುದು ಪೊಲೀಸರ ಪ್ರತೀಕಾರದ ಮನೋಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ತಮ್ಮ ದುಷ್ಕೃತ್ಯವನ್ನು ಮರೆಮಾಚಲು ಪೊಲೀಸರು ಎಂದಿನಂತೆ ತಮ್ಮ ಮೇಲೆ ಹಲ್ಲೆ ನಡೆಸಿರುವ ಕಟ್ಟು ಕಥೆಯನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆದಾಗ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವುದು ಪೊಲೀಸರ ಕರ್ತವ್ಯ. ಆದರೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರವೃತ್ತಿ ಆತಂಕಕಾರಿಯಾಗಿದೆ. ಘಟನೆಯ ಆರೋಪಿಗಳು ಪತ್ತೆಯಾಗಿಲ್ಲ ಎಂಬ ಕಾರಣಕ್ಕೆ ಇದೀಗ ಅಮಾಯಕರನ್ನು ಹಿಡಿದು ಪೊಲೀಸರು ಕೈತೊಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ನೆಲದ ಕಾನೂನನ್ನು ಗೌರವಿಸುತ್ತದೆ ಮತ್ತು ಪೊಲೀಸರ ತನಿಖೆಗೂ ಸಹಕರಿಸುತ್ತದೆ. ಆದರೆ ಘಟನೆಗೆ ಸಂಬಂಧಪಡದ ಅಮಾಯಕರನ್ನು ಸಿಲುಕಿಸಿ ಪ್ರಕರಣ ದಾಖಲಿಸುವ ಅನ್ಯಾಯದ ಕ್ರಮಕ್ಕೆ ಯಾವತ್ತೂ ಅವಕಾಶ ನೀಡುವುದಿಲ್ಲ. ನಿನ್ನೆ ನಡೆದ ಪ್ರತಿಭಟನೆಯೂ ಇದೇ ನಿಲುವಿನ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ವಿನಾ ಕಾರಣ ಲಾಠಿ ಚಾರ್ಜ್ ನಡೆಸಿ ಹಲವು ಮಂದಿ ಗಂಭೀರ ಗಾಯಗೊಳ್ಳಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್‌‌ಗೆ ಆದೇಶ ನೀಡಿದ ಅಧಿಕಾರಿಯನ್ನು ಪೊಲೀಸ್ ಇಲಾಖೆ ಕೂಡಲೇ ಅಮಾನತುಪಡಿಸಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕು. ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಇಬ್ಬರ ಮೇಲೆ ಇದೀಗ ಸುಳ್ಳು ಕೇಸು ಜಡಿಯಲಾಗಿದ್ದು, ಈ ಸುಳ್ಳು ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು. ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಪ್ರತಿಭಟನಕಾರರನ್ನೂ ಬೇಷರತ್ ಆಗಿ ಬಿಡುಗಡೆಗೊಳಿಸಬೇಕು. ಪೊಲೀಸರು ಯಾರದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಅವರು ಕಾನೂನಿನ ಘನತೆ, ಪಾವಿತ್ರ್ಯಾತೆಯನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸೆಂಬರ್ 17ರ ಶುಕ್ರವಾರದಂದು ಮಂಗಳೂರಿನಲ್ಲಿ ಎಸ್‌‌ಪಿ ಆಫೀಸ್ ಎದುರು ಮಾರ್ಚ್ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಪ್ಯುಲರ್‌ ಫ್ರಂಟ್‌‌ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಪುತ್ತೂರು ತಾಲ್ಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...