Homeಕರ್ನಾಟಕಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಅಮಾಯಕರ ಮೇಲಿನ ಕೇಸ್ ಹಿಂಪಡೆದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ: ಪಿಎಫ್‌ಐ ಆಗ್ರಹ

- Advertisement -
- Advertisement -

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಬರ್ಬರವಾಗಿ ಪೊಲೀಸರು ಲಾಠಿಚಾರ್ಚ್ ನಡೆಸಿದ್ದು ಪೊಲೀಸರ ಕೃತ್ಯ ಖಂಡನೀಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

ಪಾಪ್ಯುಲರ್‌ ಫ್ರಂಟ್‌ನ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದು, ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದು ಧರಣಿ ಕುಳಿತ್ತಿದ್ದರು ಎಂದು ಮುಖಂಡರು ತಿಳಿಸಿದ್ದಾರೆ.

ಕತ್ತಲಾವರಿಸಿದರೂ ಪ್ರತಿಭಟನಕಾರರು ಅಲ್ಲಿಂದ ಕದಲದೇ ಇದ್ದಾಗ ರಾತ್ರಿ ಸುಮಾರು 7ರ ವೇಳೆಗೆ ಓರ್ವ ನಾಯಕರನ್ನು ಬಿಡುಗಡೆಗೊಳಿಸಿದ್ದರು. ಇನ್ನಿಬ್ಬರನ್ನು ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದರು. ಆದರೆ ತುಂಬಾ ಸಮಯದ ನಂತರವೂ ಅವರನ್ನು ಬಿಡುಗಡೆಗೊಳಿಸುವ ಲಕ್ಷಣ ಕಂಡು ಬರಲಿಲ್ಲ. ಅವರಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಸೂಚನೆ ಕಂಡು ಬಂದಾಗ, ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಮತ್ತೇ ಪ್ರತಿಭಟನೆಯನ್ನು ಮುಂದುವರಿಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ಪೊಲೀಸರ ರಾಕ್ಷಸೀಯ ವರ್ತನೆ ಖಂಡನಾರ್ಹ. ಬರ್ಬರ ಲಾಠಿಚಾರ್ಜ್‌‌ನಿಂದಾಗಿ ಪ್ರತಿಭಟನಕಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಮುಸ್ಲಿಮರ ಧಾರ್ಮಿಕ ಗುರು ಸೈಯ್ಯದ್ ಆತೂರ್ ತಂಗಳ್ರವರ ತಲೆಗೆ ಗಂಭೀರ ಗಾಯವಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಲಾಠಿ ಏಟಿಗೆ ಯುವಕನೋರ್ವ ಪ್ರಜ್ಞೆ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದ ಕರುಣಾಜನಕ ದೃಶ್ಯವೂ ಕಂಡು ಬಂತು. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 40ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರು ಆ್ಯಂಬುಲೆನ್ಸ್ ಮೇಲೆಯೂ ಲಾಠಿ ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೇ ವೇಳೆ ಆ್ಯಂಬುಲೆನ್ಸ್‌ ಒಂದನ್ನು ಠಾಣೆ ಬಳಿ ತಡೆ ಹಿಡಿದಿದ್ದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ತೀವ್ರ ಅಡಚಣೆ ಉಂಟು ಮಾಡಿದ್ದರು. ಈ ಮಧ್ಯೆ, ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದ ನಾಯಕರ ಮೇಲೆಯೂ ಲಾಠಿ ಬೀಸಿ ಉದ್ಧಟತನದಿಂದ ವರ್ತಿಸಲಾಗಿದೆ ಎಂದು ದೂರಿದ್ದಾರೆ.

ಬೆಳಿಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರ ಬೆದರಿಕೆ, ಪ್ರಚೋದನೆಯ ಹೊರತಾಗಿಯೂ ಪ್ರತಿಭಟನಕಾರರು ರಾತ್ರಿಯಾದರೂ ಸಂಯಮ ಕಳೆದುಕೊಂಡಿರಲಿಲ್ಲ. ಆದರೆ ಸುಮಾರು 9:30ರ ವೇಳೆಗೆ ಪೊಲೀಸರು ಹಿಂಬದಿಯಿಂದ ಏಕಾಏಕೀ ಲಾಠಿ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಬರ್ಬರವಾಗಿ ಥಳಿಸಿದ್ದಾರೆ. ಲಾಠಿಚಾರ್ಜ್‌ನಿಂದ ಗಾಯಗೊಂಡವರ ಪೈಕಿ ಬಹುಪಾಲು ಜನರಿಗೆ ತಲೆಗೆ ಪೆಟ್ಟು ಬಿದ್ದಿರುವುದು ಪೊಲೀಸರ ಪ್ರತೀಕಾರದ ಮನೋಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ತಮ್ಮ ದುಷ್ಕೃತ್ಯವನ್ನು ಮರೆಮಾಚಲು ಪೊಲೀಸರು ಎಂದಿನಂತೆ ತಮ್ಮ ಮೇಲೆ ಹಲ್ಲೆ ನಡೆಸಿರುವ ಕಟ್ಟು ಕಥೆಯನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆದಾಗ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವುದು ಪೊಲೀಸರ ಕರ್ತವ್ಯ. ಆದರೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರವೃತ್ತಿ ಆತಂಕಕಾರಿಯಾಗಿದೆ. ಘಟನೆಯ ಆರೋಪಿಗಳು ಪತ್ತೆಯಾಗಿಲ್ಲ ಎಂಬ ಕಾರಣಕ್ಕೆ ಇದೀಗ ಅಮಾಯಕರನ್ನು ಹಿಡಿದು ಪೊಲೀಸರು ಕೈತೊಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ನೆಲದ ಕಾನೂನನ್ನು ಗೌರವಿಸುತ್ತದೆ ಮತ್ತು ಪೊಲೀಸರ ತನಿಖೆಗೂ ಸಹಕರಿಸುತ್ತದೆ. ಆದರೆ ಘಟನೆಗೆ ಸಂಬಂಧಪಡದ ಅಮಾಯಕರನ್ನು ಸಿಲುಕಿಸಿ ಪ್ರಕರಣ ದಾಖಲಿಸುವ ಅನ್ಯಾಯದ ಕ್ರಮಕ್ಕೆ ಯಾವತ್ತೂ ಅವಕಾಶ ನೀಡುವುದಿಲ್ಲ. ನಿನ್ನೆ ನಡೆದ ಪ್ರತಿಭಟನೆಯೂ ಇದೇ ನಿಲುವಿನ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ವಿನಾ ಕಾರಣ ಲಾಠಿ ಚಾರ್ಜ್ ನಡೆಸಿ ಹಲವು ಮಂದಿ ಗಂಭೀರ ಗಾಯಗೊಳ್ಳಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್‌‌ಗೆ ಆದೇಶ ನೀಡಿದ ಅಧಿಕಾರಿಯನ್ನು ಪೊಲೀಸ್ ಇಲಾಖೆ ಕೂಡಲೇ ಅಮಾನತುಪಡಿಸಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕು. ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಇಬ್ಬರ ಮೇಲೆ ಇದೀಗ ಸುಳ್ಳು ಕೇಸು ಜಡಿಯಲಾಗಿದ್ದು, ಈ ಸುಳ್ಳು ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು. ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಪ್ರತಿಭಟನಕಾರರನ್ನೂ ಬೇಷರತ್ ಆಗಿ ಬಿಡುಗಡೆಗೊಳಿಸಬೇಕು. ಪೊಲೀಸರು ಯಾರದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಅವರು ಕಾನೂನಿನ ಘನತೆ, ಪಾವಿತ್ರ್ಯಾತೆಯನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸೆಂಬರ್ 17ರ ಶುಕ್ರವಾರದಂದು ಮಂಗಳೂರಿನಲ್ಲಿ ಎಸ್‌‌ಪಿ ಆಫೀಸ್ ಎದುರು ಮಾರ್ಚ್ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಪ್ಯುಲರ್‌ ಫ್ರಂಟ್‌‌ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಪುತ್ತೂರು ತಾಲ್ಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...