Homeಮುಖಪುಟಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

- Advertisement -
- Advertisement -

ಶನಿವಾರ ಮಣಿಪುರಕ್ಕೆ ಭೇಟಿ ನೀಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗದ ನಡೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಸ್ವಾಗತಿಸಿದ್ದು, ಆದರೆ ಪ್ರಧಾನಿ ನರೇಂದ್ರ ಮೋದಿ ಗಲಭೆ ಪೀಡಿತ ರಾಜ್ಯಕ್ಕೆ ಯಾವಾಗ ಭೇಟಿ ನೀಡುತ್ತಾರೆ ಎಂದು ಕೇಳಿದ್ದಾರೆ.

ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಜೈರಾಮ್ ಅವರು, “ಮಣಿಪುರಕ್ಕೆ ಹೋಗಿರುವ ಆರು ನ್ಯಾಯಮೂರ್ತಿಗಳ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಅಲ್ಲಿ ಕಳೆದ 22 ತಿಂಗಳಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಜೊತೆಗೆ ಇಂದಿಗೂ ಮಣಿಪುರದ ಜನ ಸಮುದಾಯಗಳಲ್ಲಿ ಭಯ ಮತ್ತು ಅನುಮಾನದ ವಾತಾವರಣವಿದೆ” ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ

“ಫೆಬ್ರವರಿ 13 ರಂದು ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಆದರೆ ಪ್ರಶ್ನೆ ಏನೆಂದರೆ, ಆಗಸ್ಟ್ 1, 2023 ರಂದು ಸ್ವತಃ ಸುಪ್ರೀಂಕೋರ್ಟ್, ‘ಮಣಿಪುರದಲ್ಲಿ ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣವಾಗಿ ಬುಡಮೇಲಾಗಿದೆ’ ಎಂದು ಹೇಳಿದ ನಂತರವೂ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು 18 ತಿಂಗಳುಗಳು ಏಕೆ ತೆಗೆದುಕೊಂಡಿತು? ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಹೋಗಿರುವುದು ಒಳ್ಳೆಯದೆ, ಆದರೆ ಪ್ರಧಾನಿ ಯಾವಾಗ ಭೇಟಿ ನೀಡುತ್ತಾರೆ ಎಂಬುದು ದೊಡ್ಡ ಪ್ರಶ್ನೆ?” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗವು ಶನಿವಾರ ಮಣಿಪುರದ ಚುರಾಚಂದ್‌ಪುರದಲ್ಲಿರುವ ಪರಿಹಾರ ಶಿಬಿರಕ್ಕೆ ಭೇಟಿ ನೀಡಿತು. ನಿಯೋಗದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ವಿಕ್ರಮ್ ನಾಥ್, ಎಂ.ಎಂ. ಸುಂದರೇಶ್, ಕೆ.ವಿ. ವಿಶ್ವನಾಥನ್ ಮತ್ತು ಎನ್. ಕೋಟೀಶ್ವರ್ ಇದ್ದರು.

ಸಂಸತ್ತಿನಲ್ಲಿ ಗೃಹ ಸಚಿವಾಲಯದ (ಎಂಎಚ್‌ಎ) ಕಾರ್ಯವೈಖರಿಯ ಕುರಿತು ಚರ್ಚೆಯ ಸಂದರ್ಭದಲ್ಲಿ ಮಣಿಪುರದ ಪರಿಸ್ಥಿತಿಯನ್ನು ತಿಳಿಸದ ಗೃಹ ಸಚಿವ ಅಮಿತ್ ಶಾ ಅವರನ್ನು ಜೈರಾಮ್‌ ರಮೇಶ್ ಟೀಕಿಸಿದ್ದಾರೆ.

“ನಿನ್ನೆ, ಗೃಹ ಸಚಿವರು ತಮ್ಮ ಗೃಹ ಸಚಿವಾಲಯದ ಕೆಲಸದ ಬಗ್ಗೆ ರಾಜ್ಯಸಭೆಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಪ್ರತಿಕ್ರಿಯೆ ನೀಡಿದರು. ಆದರೆ ಅವರು ಮಣಿಪುರದ ಬಗ್ಗೆ ಹೆಚ್ಚಾಗಿ ಹೇಳಲಿಲ್ಲ. ಫೆಬ್ರವರಿ 2022 ರಲ್ಲಿ ಅಲ್ಲಿ ಎನ್‌ಡಿಎ ಭಾರಿ ಬಹುಮತದಿಂದ ಚುನಾವಣೆಯನ್ನು ಗೆದ್ದಿತ್ತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿತು. ಅದಕ್ಕೆ ಅವರಲ್ಲಿ ಉತ್ತರವಿಲ್ಲ. ಅಲ್ಲಿಗೆ ಪ್ರಧಾನಿ ಏಕೆ ಹೋಗಲಿಲ್ಲ ಎಂಬುದಕ್ಕೆ ಉತ್ತರವಿಲ್ಲ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿನ ವಿಳಂಬವನ್ನು ಪ್ರಶ್ನಿಸಿದ ಅವರು, ಮಣಿಪುರಕ್ಕೆ ಭೇಟಿ ನೀಡದೆ ಮಿಜೋರಾಂಗೆ ಭೇಟಿ ನೀಡಿದ್ದಕ್ಕಾಗಿ ಅಮಿತ್‌ ಶಾ ಅವರನ್ನು ಟೀಕಿಸಿದ್ದಾರೆ.

“ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿ ಇಷ್ಟೊಂದು ವಿಳಂಬ ಏಕೆ ಎಂಬುದಕ್ಕೆ ಅವರಲ್ಲಿ ಉತ್ತರವಿಲ್ಲ. ಗೃಹ ಸಚಿವರು ಮಿಜೋರಾಂಗೆ ಹೋಗುತ್ತಾರೆ, ಮಣಿಪುರಕ್ಕೆ ಏಕೆ ಹೋಗಲಿಲ್ಲ? ಮತ್ತು ಅಮೆರಿಕಕ್ಕೆ ಹೋದ ನಂತರ ಮಿಜೋರಾಂ ಮುಖ್ಯಮಂತ್ರಿ ಹೇಳಿರುವ ವಿಷಯಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ” ಎಂದು ಅವರು ಹೇಳಿದ್ದಾರೆ.

ಬ್ಯಾಂಕಾಕ್‌ಗೆ ಹೋಗುವ ಮೊದಲು ಅಥವಾ ಹಿಂದಿರುಗುವಾಗ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. “ಬ್ಯಾಂಕಾಕ್‌ಗೆ ಹೋಗುವ ದಾರಿಯಲ್ಲಿ ಅಥವಾ ಬ್ಯಾಂಕಾಕ್‌ನಿಂದ ಹಿಂದಿರುಗುವಾಗ, ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ. ಪ್ರಧಾನ ಮಂತ್ರಿಯವರ ಭೇಟಿಯು ಅಲ್ಲಿಗೆ ನಿರ್ಣಾಯಕವಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಬ್ಯಾಂಕಾಕ್‌ನಲ್ಲಿ ಆರನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 2 ರಿಂದ 4 ರವರೆಗೆ ಥೈಲ್ಯಾಂಡ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಫೆಬ್ರವರಿ 13 ರಂದು, ರಾಜ್ಯಪಾಲರ ವರದಿಯ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...