Homeಮುಖಪುಟಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮಣಿಪುರ ಭೇಟಿ ಹಿನ್ನಲೆ | ಮೋದಿ ಯಾವಾಗ ಭೇಟಿ ನೀಡುತ್ತರೆ ಎಂದ ಕಾಂಗ್ರೆಸ್

- Advertisement -
- Advertisement -

ಶನಿವಾರ ಮಣಿಪುರಕ್ಕೆ ಭೇಟಿ ನೀಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗದ ನಡೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಸ್ವಾಗತಿಸಿದ್ದು, ಆದರೆ ಪ್ರಧಾನಿ ನರೇಂದ್ರ ಮೋದಿ ಗಲಭೆ ಪೀಡಿತ ರಾಜ್ಯಕ್ಕೆ ಯಾವಾಗ ಭೇಟಿ ನೀಡುತ್ತಾರೆ ಎಂದು ಕೇಳಿದ್ದಾರೆ.

ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಜೈರಾಮ್ ಅವರು, “ಮಣಿಪುರಕ್ಕೆ ಹೋಗಿರುವ ಆರು ನ್ಯಾಯಮೂರ್ತಿಗಳ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಅಲ್ಲಿ ಕಳೆದ 22 ತಿಂಗಳಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಜೊತೆಗೆ ಇಂದಿಗೂ ಮಣಿಪುರದ ಜನ ಸಮುದಾಯಗಳಲ್ಲಿ ಭಯ ಮತ್ತು ಅನುಮಾನದ ವಾತಾವರಣವಿದೆ” ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ

“ಫೆಬ್ರವರಿ 13 ರಂದು ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಆದರೆ ಪ್ರಶ್ನೆ ಏನೆಂದರೆ, ಆಗಸ್ಟ್ 1, 2023 ರಂದು ಸ್ವತಃ ಸುಪ್ರೀಂಕೋರ್ಟ್, ‘ಮಣಿಪುರದಲ್ಲಿ ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣವಾಗಿ ಬುಡಮೇಲಾಗಿದೆ’ ಎಂದು ಹೇಳಿದ ನಂತರವೂ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು 18 ತಿಂಗಳುಗಳು ಏಕೆ ತೆಗೆದುಕೊಂಡಿತು? ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಹೋಗಿರುವುದು ಒಳ್ಳೆಯದೆ, ಆದರೆ ಪ್ರಧಾನಿ ಯಾವಾಗ ಭೇಟಿ ನೀಡುತ್ತಾರೆ ಎಂಬುದು ದೊಡ್ಡ ಪ್ರಶ್ನೆ?” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗವು ಶನಿವಾರ ಮಣಿಪುರದ ಚುರಾಚಂದ್‌ಪುರದಲ್ಲಿರುವ ಪರಿಹಾರ ಶಿಬಿರಕ್ಕೆ ಭೇಟಿ ನೀಡಿತು. ನಿಯೋಗದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ವಿಕ್ರಮ್ ನಾಥ್, ಎಂ.ಎಂ. ಸುಂದರೇಶ್, ಕೆ.ವಿ. ವಿಶ್ವನಾಥನ್ ಮತ್ತು ಎನ್. ಕೋಟೀಶ್ವರ್ ಇದ್ದರು.

ಸಂಸತ್ತಿನಲ್ಲಿ ಗೃಹ ಸಚಿವಾಲಯದ (ಎಂಎಚ್‌ಎ) ಕಾರ್ಯವೈಖರಿಯ ಕುರಿತು ಚರ್ಚೆಯ ಸಂದರ್ಭದಲ್ಲಿ ಮಣಿಪುರದ ಪರಿಸ್ಥಿತಿಯನ್ನು ತಿಳಿಸದ ಗೃಹ ಸಚಿವ ಅಮಿತ್ ಶಾ ಅವರನ್ನು ಜೈರಾಮ್‌ ರಮೇಶ್ ಟೀಕಿಸಿದ್ದಾರೆ.

“ನಿನ್ನೆ, ಗೃಹ ಸಚಿವರು ತಮ್ಮ ಗೃಹ ಸಚಿವಾಲಯದ ಕೆಲಸದ ಬಗ್ಗೆ ರಾಜ್ಯಸಭೆಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಪ್ರತಿಕ್ರಿಯೆ ನೀಡಿದರು. ಆದರೆ ಅವರು ಮಣಿಪುರದ ಬಗ್ಗೆ ಹೆಚ್ಚಾಗಿ ಹೇಳಲಿಲ್ಲ. ಫೆಬ್ರವರಿ 2022 ರಲ್ಲಿ ಅಲ್ಲಿ ಎನ್‌ಡಿಎ ಭಾರಿ ಬಹುಮತದಿಂದ ಚುನಾವಣೆಯನ್ನು ಗೆದ್ದಿತ್ತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿತು. ಅದಕ್ಕೆ ಅವರಲ್ಲಿ ಉತ್ತರವಿಲ್ಲ. ಅಲ್ಲಿಗೆ ಪ್ರಧಾನಿ ಏಕೆ ಹೋಗಲಿಲ್ಲ ಎಂಬುದಕ್ಕೆ ಉತ್ತರವಿಲ್ಲ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿನ ವಿಳಂಬವನ್ನು ಪ್ರಶ್ನಿಸಿದ ಅವರು, ಮಣಿಪುರಕ್ಕೆ ಭೇಟಿ ನೀಡದೆ ಮಿಜೋರಾಂಗೆ ಭೇಟಿ ನೀಡಿದ್ದಕ್ಕಾಗಿ ಅಮಿತ್‌ ಶಾ ಅವರನ್ನು ಟೀಕಿಸಿದ್ದಾರೆ.

“ರಾಷ್ಟ್ರಪತಿ ಆಳ್ವಿಕೆ ಹೇರುವಲ್ಲಿ ಇಷ್ಟೊಂದು ವಿಳಂಬ ಏಕೆ ಎಂಬುದಕ್ಕೆ ಅವರಲ್ಲಿ ಉತ್ತರವಿಲ್ಲ. ಗೃಹ ಸಚಿವರು ಮಿಜೋರಾಂಗೆ ಹೋಗುತ್ತಾರೆ, ಮಣಿಪುರಕ್ಕೆ ಏಕೆ ಹೋಗಲಿಲ್ಲ? ಮತ್ತು ಅಮೆರಿಕಕ್ಕೆ ಹೋದ ನಂತರ ಮಿಜೋರಾಂ ಮುಖ್ಯಮಂತ್ರಿ ಹೇಳಿರುವ ವಿಷಯಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ” ಎಂದು ಅವರು ಹೇಳಿದ್ದಾರೆ.

ಬ್ಯಾಂಕಾಕ್‌ಗೆ ಹೋಗುವ ಮೊದಲು ಅಥವಾ ಹಿಂದಿರುಗುವಾಗ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. “ಬ್ಯಾಂಕಾಕ್‌ಗೆ ಹೋಗುವ ದಾರಿಯಲ್ಲಿ ಅಥವಾ ಬ್ಯಾಂಕಾಕ್‌ನಿಂದ ಹಿಂದಿರುಗುವಾಗ, ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ. ಪ್ರಧಾನ ಮಂತ್ರಿಯವರ ಭೇಟಿಯು ಅಲ್ಲಿಗೆ ನಿರ್ಣಾಯಕವಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಬ್ಯಾಂಕಾಕ್‌ನಲ್ಲಿ ಆರನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 2 ರಿಂದ 4 ರವರೆಗೆ ಥೈಲ್ಯಾಂಡ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಫೆಬ್ರವರಿ 13 ರಂದು, ರಾಜ್ಯಪಾಲರ ವರದಿಯ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...