Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...