Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...