Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...