Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...