Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...