Homeಮುಖಪುಟಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಮತ್ತು ಸಚಿವರ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಮಂಡಿಸಿದ ಅಮಿತ್ ಶಾ

- Advertisement -
- Advertisement -

ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡನೆ ಆಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. 

ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಮಸೂದೆಗಳ ಪ್ರತಿಗಳನ್ನು ಹರಿದು ಬಿಸಾಕಿದರು.

ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಮೊದಲು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದರು. ಇದು ಸರ್ಕಾರಗಳನ್ನು ಅಸ್ಥಿರಗೊಳಿಸುವ ಅಸ್ತ್ರವೇ ಹೊರತು, ಇನ್ನೇನು ಅಲ್ಲ ಎಂದರು.

ಓವೈಸಿ ಮಾತಿಗೆ ಧ್ವನಿಗೂಡಿಸಿದ ಪ್ರತಿಪಕ್ಷ ಸಂಸದರು, ಘೋಷಣೆಗಳನ್ನು ಕೂಗಿದರು. ಇದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಮೂರು ಗಂಟೆಗೆ ಮತ್ತೆ ಸಭೆ ಸೇರಿದಾಗ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಹಾಗಾಗಿ, ಸ್ಪೀಕರ್ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಿಕೆ ಮಾಡಿದರು.

ಮಸೂದೆಗಳ ಮಂಡನೆಯ ಬಳಿಕ ಅಮಿತ್ ಶಾ ಅವರು ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ನಿರ್ಣಯವನ್ನು ಮಂಡಿಸಿದರು. ಅದಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆಯಿತು. 

ಮೂರು ಮಸೂದೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳಲ್ಲಿ ಸರ್ಕಾವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಬಹುದು. ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ಇಂತಹ ಮಸೂದೆಗಳನ್ನು ತರುವ ಮೂಲಕ ಬಿಜೆಪಿ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚುಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಇದೊಂದು ಕಠಿಣ ನಿಲುವಾಗಿದೆ. ಭ್ರಷ್ಟಾಚಾರ ವಿರೋಧಿ ಕ್ರಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡರೂ, ಇದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ. ಅಪರಾಧಿ ಎಂದು ಸಾಬೀತಾಗುವ ಮೊದಲೇ ಚುನಾಯಿತ ಪ್ರತಿನಿಧಿಗಳನ್ನು ಪದಚ್ಯುತಗೊಳಿಸಲು ಇದು ಅವಕಾಶ ನೀಡುತ್ತದೆ” ಎಂದು ಸಂಸತ್ ಸಂಕೀರ್ಣದಲ್ಲಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....