Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...