Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...