Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...