Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...