Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...