Homeಮುಖಪುಟಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ಮಹಾರಾಷ್ಟ್ರ ಕೇಡರ್‌ನ 2022ನೇ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರ ಆಯ್ಕೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಇಂದು (ಜು.31) ಅನೂರ್ಜಿತಗೊಳಿಸಿದೆ.

ಅಲ್ಲದೆ, ಪೂಜಾ ಅವರು ಜೀವನಪರ್ಯಂತ ಆಯೋಗ ನಡೆಸುವ ಯಾವುದೇ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ನಿರ್ಬಂಧ ವಿಧಿಸಿದೆ.

ಅಂಗವೈಕಲ್ಯ ಹಾಗೂ ಒಬಿಸಿ ಕೋಟಾ ದುರುಪಯೋಗಪಡಿಸಿದ್ದಾರೆ ಎಂಬ ಪೂಜಾ ಖೇಡ್ಕರ್ ವಿರುದ್ದದ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಅನೂರ್ಜಿತಗೊಳಿಸಲಾಗಿದೆ ಎಂದು ಯುಪಿಎಸ್‌ಸಿ ಹೇಳಿರುವುದಾಗಿ ವರದಿಯಾಗಿದೆ.

ಮಹಾರಾಷ್ಟ್ರದ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೂಜಾ ಅವರ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆ, ಅವರನ್ನು ವರ್ಗಾವಣೆ ಮಾಡಲಾಗಿತ್ತು. ಯುಪಿಎಸ್‌ಸಿ ಪೂಜಾ ವಿರುದ್ದ ನಾಗರಿಕ ಸೇವಾ ಪರೀಕ್ಷೆ(ಸಿಎಸ್‌ಇ) 2022ರ ನಿಯಮಗಳ ಅಡಿ ತನಿಖೆ ಕೈಗೊಂಡಿತ್ತು.

ತಮ್ಮ ಮೇಲಿನ ಆರೋಪಗಳಿಗೆ ಜುಲೈ 25ರೊಳಗೆ ಉತ್ತರ ನೀಡುವಂತೆ ಪೂಜಾ ಅವರಿಗೆ ಯುಪಿಎಸ್‌ಸಿ ನೋಟಿಸ್ ನೀಡಿತ್ತು. ಆದರೆ, ಅವರು ಆಗಸ್ಟ್ 4ರವರೆಗೆ ಸಮಯ ವಿಸ್ತರಿಸುವಂತೆ ಕೋರಿದ್ದರು. ಅದಕ್ಕೆ ನಿರಾಕರಿಸಿದ್ದ ಯುಪಿಎಸ್‌ಸಿ ಜುಲೈ 30ರೊಳಗೆ ಉತ್ತರ ನೀಡುವಂತೆ ಆದೇಶಿಸಿತ್ತು. ನಿಗದಿತ ಅವಧಿಯಲ್ಲಿ ಪ್ರತಿಕ್ರಿಯೆ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಪೂಜಾ ನಿಗದಿತ ಅವಧಿಯಲ್ಲಿ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ.

ಪೂಜಾ ಖೇಡ್ಕರ್ ವಿರುದ್ದ ಆರೋಪದ ತನಿಖೆ ವೇಳೆ ಲಭ್ಯವಿರುವ ಎಲ್ಲಾ ದಾಖಲೆಗಳನ್ನು ಯುಪಿಎಸ್‌ಸಿ ಪರಿಶೀಲಿಸಿದೆ. 2009 ಮತ್ತು 2023ರ ನಡುವೆ ಐಎಎಸ್ ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ತೇರ್ಗಡೆಯಾದ 15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ಡೇಟಾವನ್ನು ಪರಿಶೀಲಿಸಲಾಗಿದೆ. ಈ ವೇಳೆ ಪೂಜಾ ಸುಳ್ಳು ಹೇಳಿರುವುದು ರುಜುವಾತಾಗಿದೆ ಎಂದು ವರದಿಗಳು ತಿಳಿಸಿವೆ.

ಕಳೆದ ಜೂನ್‌ನಲ್ಲಿ ಪುಣೆಯ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಪತ್ರ ಬರೆದು ಪೂಜಾ ಖೇಡ್ಕರ್ ವಿರುದ್ದ ಆರೋಪಗಳನ್ನು ಮಾಡಿದಾಗ ಅವರ ಕುರಿತು ಚರ್ಚೆಗಳು ಪ್ರಾರಂಭವಾಗಿತ್ತು. ಪ್ರೊಬೇಷನರಿ ಅಧಿಕಾರಿ ಪೂಜಾ ಅವರು ಕಾರು, ಸಿಬ್ಬಂದಿ ಮತ್ತು ಕಚೇರಿಯಂತಹ ಸವಲತ್ತುಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತನ್ನ ಪತ್ರದಲ್ಲಿ ಆರೋಪಿಸಿದ್ದರು. ನಂತರ ಪೂಜಾ ಅವರನ್ನು ವಾಶಿಮ್‌ಗೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ : ಅನುರಾಗ್ ಠಾಕೂರ್ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ : ಹಕ್ಕುಚ್ಯುತಿ ದೂರು ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Just dismissal from service and dibar from upsc examinations is not at all punishment. Recover all the salary and allowances from the date of appointment
    Apart criminal case to be filed and to be jailed wrong declaration.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...