Homeಮುಖಪುಟಯುಪಿಎಸ್ಸಿ ಜಿಹಾದ್ ಪ್ರಕರಣ: ವಿಚಾರಣಾಪೀಠದ ನ್ಯಾಯಮೂರ್ತಿಯ ಬದಲಾವಣೆ ಮಾಡಿದ್ದು ಏಕೆ?

ಯುಪಿಎಸ್ಸಿ ಜಿಹಾದ್ ಪ್ರಕರಣ: ವಿಚಾರಣಾಪೀಠದ ನ್ಯಾಯಮೂರ್ತಿಯ ಬದಲಾವಣೆ ಮಾಡಿದ್ದು ಏಕೆ?

ನ್ಯಾಯಮೂರ್ತಿ ಜೋಸೆಫ್ ಈ ಪ್ರಕರಣವನ್ನು ಕೊನೆಯದಾಗಿ ಸೆಪ್ಟಂಬರ್ 24 ರಂದು ಆಲಿಸಿದ್ದರು. ಅಂದು ಅವರು ಸುದರ್ಶನ್ ಟಿವಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ಸುದರ್ಶನ್ ಟಿವಿಯ “ಯುಪಿಎಸ್ಸಿ ಜಿಹಾದ್” ಎಂಬ ವಿವಾದಿತ ಕಾರ್ಯಕ್ರಮ ಪ್ರಸಾರದ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪೀಠದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರನ್ನು ಬದಲಾಯಿಸಿ ಅವರ ಜಾಗಕ್ಕೆ ಬೇರೊಬ್ಬ ನ್ಯಾಯಮೂರ್ತಿಯನ್ನು ನೇಮಿಸಲಾಗಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ನೇತೃತ್ವದಲ್ಲಿ ಇಂದೂ ಮಲ್ಹೋತ್ರಾ ಜೊತೆಗೆ ಕೆ.ಎಂ.ಜೋಸೆಫ್ ಅವರು ಕೂಡಾ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ’ಯುಪಿಎಸ್ಸಿ ಜಿಹಾದ್’- ಕಾರ್ಯಕ್ರಮವನ್ನು “ರೋಗಗ್ರಸ್ಥ” ಎಂದು ಕರೆದ ನ್ಯಾಯಾಲಯ.

ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಆರೋಪಿಸಿ, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿ ಸುದರ್ಶನ್ ಟಿವಿ ಯುಪಿಎಸ್ಸಿ ಜಿಹಾದ್ ಎಂಬ ಕಾರ್ಯಕ್ರಮವನ್ನು ಮಾಡುತ್ತಿತ್ತು. ಇದರ ವಿರುದ್ದ ಹೈಕೋರ್ಟ್‌ಗಳು ಕಿಡಿಕಾರಿದ್ದವು. ನಂತರ ಪ್ರಕರಣ ಸುಪ್ರೀಂಕೋರ್ಟ್‌‌ ಮೆಟ್ಟೆಲೇರಿತ್ತು.

ಸುದರ್ಶನ ಟಿವಿಯ ಈ ಕಾರ್ಯಕ್ರಮ ಕುರಿತ ಪ್ರಕರಣವನ್ನು ಈಗ ನ್ಯಾಯಮೂರ್ತಿಗಳಾದ ಚಂದ್ರಚೂಡ್, ಮಲ್ಹೋತ್ರಾ ಹಾಗೂ ಇಂದಿರಾ ಬ್ಯಾನರ್ಜಿ ಒಳಗೊಂಡ ನ್ಯಾಯಪೀಠವು ಅಕ್ಟೋಬರ್‌ 5 ರಂದು ವಿಚಾರಣೆ ನಡೆಸಲಿದೆ ಬಾರ್‌ ಆಂಡ್‌ ಬೆಂಚ್‌ ವರದಿ ಮಾಡಿದೆ.

ವಿಚಾರಣೆಗೆ ಮುಂಚಿತವಾಗಿ ನ್ಯಾಯಮೂರ್ತಿ ಜೋಸೆಫ್ ಅವರನ್ನು ನ್ಯಾಯಪೀಠದಿಂದ ಯಾಕೆ ಕೈಬಿಡಲಾಗಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಈ ಪ್ರಕರಣವನ್ನು ಕೊನೆಯದಾಗಿ ಸೆಪ್ಟಂಬರ್ 24 ರಂದು ಆಲಿಸಿದ್ದರು. ಅಂದು ಅವರು ಸುದರ್ಶನ್ ಟಿವಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಸಮಾಜದಲ್ಲಿ ಈಗಾಗಲೇ ಬೇರೂರುತ್ತಿರುವ ಇಸ್ಲಾಮೋಫೋಬಿಯ ಜೊತೆಗೆ ವಾಹಿನಿಯ ಈ ಕಾರ್ಯಕ್ರಮದ ಪ್ರಸಾರವು ಮುಸ್ಲಿಂ ಸಮುದಾಯದ ಬಗ್ಗೆ ಅನುಮಾನ ಹುಟ್ಟಿಸುತ್ತದೆ ಎಂದು ಹಲವರು ವಿರೋಧಿಸಿದ್ದರು. ಕೆಳಹಂತದ ಕೋರ್ಟ್‌ಗಳು ಸಹ ಇದೇ ಅಭಿಪ್ರಾಯಪಟ್ಟಿದ್ದವು. ಆದರೆ ಈಗ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳನ್ನು ಏಕಾಏಕಿ ಬದಲಾವಣೆ ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ವಿಡಿಯೋ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...