Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...