Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...