Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...