Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...