Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...