Homeಅಂತರಾಷ್ಟ್ರೀಯJNU ವಿದ್ಯಾರ್ಥಿ, ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಪ್ರಶಸ್ತಿ

JNU ವಿದ್ಯಾರ್ಥಿ, ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಪ್ರಶಸ್ತಿ

- Advertisement -
- Advertisement -

2019ನೇ ಸಾಲಿನ ಅರ್ಥಶಾಸ್ತ್ರಜ್ಞ ಕ್ಷೇತ್ರದಲ್ಲಿನ ಸಾಧನೆಗೆ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸೇರಿ ಮೂವರು ಅರ್ಥಶಾಸ್ತ್ರಜ್ಞರು ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಫೆಂಚ್-ಅಮೆರಿಕನ್ ಅರ್ಥಶಾಸ್ತ್ರಜ್ಞ ಎಸ್ತಾರ್ ಡೂಪ್ಲೋ ಮತ್ತು Iಅಮೆರಿಕದ ಮೈಕೆಲ್ ಕ್ರೆಮರ್ ಅವರಿಗೆ ಪ್ರಶಸ್ತಿ ದೊರೆತಿದೆ. ಜಾಗತಿಕ ಬಡತನ ನಿವಾರಣೆಗೆ ಕೈಗೊಂಡ ಪ್ರಾಯೋಗಿಕ ಅಧ್ಯಯನ ಪರಿಗಣಿಸಿ, ಮೂವರಿಗೆ ಸ್ವಿಡೀಶ್ ಅಕಾಡೆಮಿ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇನ್ನು ನೊಬೆಲ್ ಪ್ರಶಸ್ತಿಯ ಮೊತ್ತವನ್ನು ಮೂವರು ಹಂಚಿಕೊಳ್ಳಲಿದ್ದಾರೆ.

58 ವರ್ಷದ ಅಭಿಜಿತ್ ಬ್ಯಾನರ್ಜಿ ಕೋಲ್ಕತ್ತಾ ಮೂಲದವರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪಡೆದಿದ್ದರು. ನಂತರ ಅಮೆರಿಕದ ಎಂಐಟಿಯಲ್ಲಿ ಅರ್ಥಶಾಸ್ತ್ರಜ್ಞ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೊಬ್ಬ ಪ್ರಶಸ್ತಿ ಪುರಸ್ಕೃತ 57 ವರ್ಷದ ಎಸ್ತಾರ್ ಡೂಪ್ಲೋ ಎಂಐಟಿಯಲ್ಲಿ ಪಿ.ಎಚ್.ಡಿ ಪಡೆದಿದ್ದು, ಅರ್ಥಶಾಸ್ತ್ರ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು 55 ವರ್ಷದ ಮೈಕೆಲ್ ಕ್ರೆಮರ್ ಕೂಡ ಎಂಐಟಿಯಲ್ಲಿ ಪಿ.ಎಚ್.ಡಿ ಪಡೆದಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿಗೆ ಸಂದಿರುವ ನೊಬೆಲ್ ಪ್ರಶಸ್ತಿಗೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಯುವ ನೇತಾರ ಜಿಗ್ನೇಶ್ ಮೇವಾನಿ, ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿ, ಅಭಿಜಿತ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಇನ್ನು ರಾಜಾರಾಂ ತಲ್ಲೂರ್ ಅವರು, ‘ಇವರಿಗ್ಯಾರು ನೊಬೆಲ್ ಕೊಟ್ರು ಮಾರಾಯ್ರೆ’..?!!!
ಇವರು ಜೆ.ಎನ್.ಯು ಪ್ರಾಡಕ್ಟ್. ಜತೆಗೆ ಹಾರ್ವರ್ಡೂ ಹೌದು;ಹಾರ್ಡ್ ವರ್ಕೂ ಹೌದು. ಮೇಲಾಗಿ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ NYAY ಯೋಜನೆ ಇವರದೇ ಸಲಹೆಯಂತೆ. ಡಿಮಾನಿಟೈಸೇಷನ್ ಲಾಜಿಕ್ಕೇ ಅವರಿಗೆ ಇನ್ನೂ ಅರ್ಥ ಆಗಿಲ್ಲವಂತೆ. ಎಂಥದು ಮಾರಾಯ್ರೆ, ಭಕ್ತರಿಗೆ ಅಷ್ಟು ಚೆನ್ನಾಗಿ ಅರ್ಥ ಆದದ್ದು, ಅರೆದು ಕುಡಿದದ್ದು – ತಜ್ಞರಾಗಿ ಇವರಿಗೆ ಅರ್ಥ ಆಗ್ಲಿಲ್ಲ ಅಂದ್ರೆ ಎಂಥಾ ತಜ್ಞರಿವರು..! ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಇನ್ನು ಬಡವರ ಪರವಾಗಿ ಇವರ ಚಿಂತನೆಗಳಿರುವ ಇವರು ನರೇಗಾ ಯೋಜನೆ ಜಾರಿಯಲ್ಲಿಯೂ ಪ್ರಧಾನ ಪಾತ್ರವಹಿಸಿದ್ದರು. ಹಾಗಾಗಿ ಇವರನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ “ಅರ್ಬನ್‌ ನಕ್ಸಲ್‌” ಎಂದು ಹಲವರು ಕರೆದುದ್ದಲ್ಲದೇ ಅವರಿಗೆ ನೊಬೆಲ್ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳಿಂದ ‘ನಗರದ ನಕ್ಸಲ್’ ಎಂದು ಬಿರುದಾಂಕಿತರಾಗಿದ್ದ, JNU ವಿದ್ಯಾರ್ಥಿಯಾಗಿದ್ದ ಅಭಿಜಿತ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ದೊರಕಿರುವುದು ಭಾರತದ ಜಾತ್ಯತೀತವಾದಿಗಳಿಗೆ ಹೆಮ್ಮೆಯ ಸಂಗತಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...