Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...