Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...