Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...