Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...