Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...