Homeಮುಖಪುಟಪ್ರೊ.ಸಾಯಿಬಾಬಾ ಖುಲಾಸೆ ವಿರೋಧಿಸಿ ಮಹಾರಾಷ್ಟ್ರ ಸರ್ಕಾರದಿಂದ ಸುಪ್ರೀಂನಲ್ಲಿ ತುರ್ತು ಮೇಲ್ಮನವಿ

ಪ್ರೊ.ಸಾಯಿಬಾಬಾ ಖುಲಾಸೆ ವಿರೋಧಿಸಿ ಮಹಾರಾಷ್ಟ್ರ ಸರ್ಕಾರದಿಂದ ಸುಪ್ರೀಂನಲ್ಲಿ ತುರ್ತು ಮೇಲ್ಮನವಿ

- Advertisement -
- Advertisement -

ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್‌‌ನ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತುರ್ತು ಮನವಿಯನ್ನು ಸಲ್ಲಿಸಿದೆ. ಸರ್ಕಾರದ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್ ಶನಿವಾರ (ಇಂದು) ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬೇಲಾ ತ್ರಿವೇದಿ ಅವರ ಪೀಠದ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿದೆ.

ಪೀಠವು ಈ ಪ್ರಕರಣವನ್ನು ಬೆಳಿಗ್ಗೆ 11 ಗಂಟೆಗೆ ಆಲಿಸುವ ಸಾಧ್ಯತೆಯಿದೆ. ಹೈಕೋರ್ಟ್‌ ನೀಡಿದ್ದ ತೀರ್ಪಗೆ ತಡೆ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸುವಂತೆ ತೀರ್ಪು ನೀಡಿದ ನಂತರ ಮಹಾರಾಷ್ಟ್ರ ಸರ್ಕಾರವು ಆದೇಶಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ತ್ವರಿತವಾಗಿ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ, ಸರ್ವೋಚ್ಚ ನ್ಯಾಯಾಲಯವು ಈ ವಿಷಯದ ತುರ್ತು ಪಟ್ಟಿಯನ್ನು ಕೋರುವ ಅರ್ಜಿಯನ್ನು ನೋಂದಾವಣೆ ಮುಂದೆ ಸಲ್ಲಿಸಲು ಮಹಾರಾಷ್ಟ್ರಕ್ಕೆ ಅನುಮತಿ ನೀಡಿದೆ.

ಇದನ್ನೂ ಓದಿ: ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ತುರ್ತು ಪಟ್ಟಿಗಾಗಿ ವಿಷಯವನ್ನು ಪ್ರಸ್ತಾಪಿಸಿ ತೀರ್ಪಿಗೆ ತಡೆಯಾಜ್ಞೆ ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಮನವಿಯನ್ನು ನಿರಾಕರಿಸಿತ್ತು.

ಬಂಧನಕ್ಕೊಳಗಾದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಶುಕ್ರವಾರ ಆದೇಶಿಸಿತ್ತು. 2017 ರಲ್ಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಪ್ರಕರಣದಲ್ಲಿ ಅವರ ಜೊತೆಗೆ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...