Homeಕರೋನಾ ತಲ್ಲಣಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ಅಕ್ಷರಶಃ ಸ್ಮಶಾನವನ್ನಾಗಿಸಿದೆ. ದೇಶದ ಆರೋಗ್ಯ ವ್ಯವಸ್ಥೆಯ ಕಳಪೆ ಮಟ್ಟವನ್ನು ಜಗಜ್ಜಾಹೀರುಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿತನವನ್ನು ಬಯಲುಗೊಳಿಸಿದೆ. ಕಳೆದ ಆರು ವರ್ಷಗಳಲ್ಲಿ ಕೈಗೊಂಡ ಮುಂದಾಲೋಚನಾ ರಹಿತ ನೋಟುರದ್ದತಿ, ಜಿಎಸ್‌ಟಿ, ಕೋವಿಡ್ ಲಾಕ್‌ಡೌನ್‌ಗಳಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿಯು ಐಸಿಯುನಲ್ಲಿದೆ. ಇದರ ಪರಿಣಾಮವಾಗಿ ಕಳೆದ ಒಂದೂವರೆ ವರ್ಷದಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಇಲ್ಲ. ಹಲವು ರಾಜ್ಯ ಸರ್ಕಾರಗಳ ನೌಕರರ ಸಂಬಳದಲ್ಲಿ ಕಡಿತಗೊಳಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನೂರರ ಗಡಿ ಮುಟ್ಟಿದೆ. ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಪರೋಕ್ಷ ತೆರಿಗೆ ಆಕಾಶ ನೋಡುತ್ತಿದೆ. ಅಸಂಘಟಿತ ಶ್ರಮಿಕರಂತೂ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದೆಲ್ಲದರ ಪರಿಣಾಮವಾಗಿ ಭಾರತದ ಜಿಡಿಪಿ ದರ ಸಾರ್ವಕಾಲಿಕವಾಗಿ ಪಾತಾಳಕ್ಕಿಳಿದಿದೆ. ಇನ್ನೇನು ಚೇತರಿಸಿಕೊಳ್ಳುತ್ತಿರುವಾಗ ಮತ್ತೆ ಎರಡನೆಯ ಅಲೆ ಅಪ್ಪಳಿಸಿದೆ.

ಒಂದು ಕಡೆ ಭಾರತ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಸೋತು ಭಾರತೀಯರನ್ನು ಬೀದಿ ಹೆಣವಾಗಿಸುತ್ತಿದ್ದರೆ ಮತ್ತೊಂದು ಕಡೆಯಲ್ಲಿ ದೇಶದ ಅತಿ ಶ್ರೀಮಂತರು ಖಾಸಗಿ ಜೆಟ್ ವಿಮಾನಗಳಲ್ಲಿ ತಮ್ಮ ಕುಟುಂಬಗಳ ಸಮೇತ ವಿದೇಶಗಳಿಗೆ ಸುರಕ್ಷತೆಗಾಗಿ ಹಾರಿದ್ದಾರೆ. ಮತ್ತಷ್ಟು ಶ್ರೀಮಂತರು ತಮ್ಮ ಐಷಾರಾಮಿ ಕೋಟೆಗಳೊಳಗೆ ಸುರಕ್ಷಿತವಾಗಿದ್ದಾರೆ. ಆಶ್ಚರ್ಯವೆಂದರೆ, ಕೋವಿಡ್ ಕಾಲದಲ್ಲಿಯೂ ತಮ್ಮ ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ.

ಮೊದಲ ಕೋವಿಡ್ ಲಾಕ್‌ಡೌನ್‌ನಿಂದಾಗಿ ಇಡೀ ಭಾರತದ ಆರ್ಥಿಕ ಪರಿಸ್ಥಿತಿ ನೆಲಕ್ಕುರುಳಿತು. ಆದರೆ ಇದೇ ಸಮಯದಲ್ಲಿ ಭಾರತದಲ್ಲಿ ಹೆಚ್ಚುವರಿಯಾಗಿ ನಾಲ್ವರು ಶತಕೋಟ್ಯಾಧಿಪತಿಗಳು ಹುಟ್ಟಿಕೊಂಡರು. ಮುಖೆಶ್ ಅಂಬಾನಿಯ ಆದಾಯ ಶೇ.24 ರಷ್ಟು, ಗೌತಮ್ ಅದಾನಿಯ ಆದಾಯ ಶೇ.174 ರಷ್ಟು ಹೆಚ್ಚಾಯಿತು. ಇದೇ ರೀತಿ ಶೇ. 91 ರಷ್ಟು ಅತಿ ಶ್ರೀಮಂತರು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡಿದ್ದಾರೆ. ಭಾರತದಲ್ಲಿ 9,12,000 ದಶಲಕ್ಷಾಧಿಪತಿಗಳು ಹಾಗೂ 140 ಶತಕೋಟ್ಯಾಧಿಪತಿಗಳನ್ನು ಹೊಂದಿರುವ ಜಗತ್ತಿನ ಮೂರನೇ ರಾಷ್ಟ್ರ ಭಾರತವಾಗಿದೆ. ಒಟ್ಟಾರೆ 953 ಜನರು ತಮ್ಮ ವಾರ್ಷಿಕ ಸರಾಸರಿ ಆದಾಯವನ್ನು ತಲಾ 5,278 ಕೋಟಿಗಿಂತಲೂ ಹೆಚ್ಚು ಗಳಿಸಿ ಅತಿಶ್ರೀಮಂತರೆನಿಸಿಕೊಂಡಿದ್ದಾರೆ. ಭಾರತದ ಮೊದಲ ಹತ್ತು ಅತಿಶ್ರೀಮಂತರ ಒಟ್ಟು ಸಂಪತ್ತು ಬರೋಬ್ಬರಿ 12 ಲಕ್ಷಕೋಟಿ! ಅಷ್ಟೇ ಅಲ, 2025 ರಷ್ಟೊತ್ತಿಗೆ ಅತಿಶ್ರೀಮಂತರ ಜನಸಂಖ್ಯೆ ಶೇ.63ರಷ್ಟು ಹೆಚ್ಚಾಗಲಿದೆ. ಆಕ್ಸ್‌ಫಾಮ್ ವರದಿಯ ಪ್ರಕಾರ ದೇಶದ ಶೇ.10 ರಷ್ಟು ಶ್ರೀಮಂತರು ಶೇ.74ರಷ್ಟು ಸಂಪತ್ತನ್ನು ಹೊಂದಿದ್ದರೆ, ಇನ್ನುಳಿದ ಶೇ.90ರಷ್ಟು ಮೇಲ್ಮಧ್ಯಮ, ಮಧ್ಯಮ ಮತ್ತು ಬಡ ಭಾರತೀಯರು ಕೇವಲ ಶೇ.26ರಷ್ಟು ಸಂಪತ್ತನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಭಾರತದಲ್ಲಿ ಅತಿಶ್ರೀಮಂತರ ಮತ್ತು ಬಡವರ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಸಾಕ್ಷಿ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 94ಕ್ಕೆ ಕುಸಿದಿರುವುದು!

ಈ ಮೇಲಿನ ಮಾಹಿತಿಯಿಂದ 1. ಭಾರತದ ಆರ್ಥಿಕ ಕುಸಿತದ ಪರಿಣಾಮ ಭಾರತದವರೇ ಆದ ಶ್ರೀಮಂತರ ಮೇಲೆ ಬೀರುವುದಿಲ್ಲವೇ? 2. ಭಾರತದ ಜಿಡಿಪಿ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಅತಿ ಶ್ರೀಮಂತರ ಆಸ್ತಿ ಹೆಚ್ಚಾಗಲು ಕಾರಣವೇನು? ಎಂಬ ಪ್ರಶ್ನೆಗಳು ಮೂಡುತ್ತವೆ. ಇದಕ್ಕೆ ಉತ್ತರ ಸ್ಪಷ್ಟ. ಅದೇನೆಂದರೆ, ’ಭಾರತ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿರುವುದು ಹಾಗೂ ಶ್ರೀಮಂತರಿಗೆ ನೀಡುವ ವಿಶೇಷ ಸೌಲಭ್ಯಗಳು’. ಭಾರತವು ಮೊದಲ ಕೋವಿಡ್ ಅಲೆಯ ಹೊಸ್ತಿಲಲ್ಲಿದ್ದಾಗ, ನೋಟು ರದ್ದತಿಯ ಹಾನಿಯನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ಶೇ೩೦ರಿಂದ ಶೇ.22ಕ್ಕೆ ಇಳಿಸಿತು. ನೂತನ ಕಂಪೆನಿಗಳ ತೆರಿಗೆಯನ್ನು ಶೇ.25ರಿಂದ ಶೇ.15ಕ್ಕೆ ಇಳಿಸಿತು. ಇದರಿಂದಾಗಿ 2019-20ನೇ ಸಾಲಿನಲ್ಲಿ ಶ್ರೀಮಂತರಿಗೆ 1.5 ಲಕ್ಷ ಕೋಟಿ ಲಾಭವಾಯಿತು. ಅಷ್ಟೇ ಪ್ರಮಾಣದ ನಷ್ಟ ಸಾರ್ವಜನಿಕ ಖಜಾನೆಗಾಯಿತು. ಇದಕ್ಕೂ ಮುಂಚೆ 2016ರಲ್ಲಿಯೇ ಮೋದಿ ಸರ್ಕಾರ ’ಸಂಪತ್ತಿನ ತೆರಿಗೆ’ಯನ್ನೇ ರದ್ದುಗೊಳಿಸಿತ್ತು.

ಇದರಿಂದಾಗಿ ಕ್ರಮೇಣ ಭಾರತ ಸರ್ಕಾರದ ಖಜಾನೆಗೆ ಪ್ರತ್ಯಕ್ಷ ತೆರಿಗೆಯ ಪಾಲು ಕಡಿಮೆಯಾಯಿತು. ಈ ಹಾನಿಯನ್ನು ತಪ್ಪಿಸಿಕೊಳ್ಳಲು ಸಾಮಾನ್ಯ ಜನರ ಮೇಲೆ ಪೆಟ್ರೋಲ್, ಡೀಸೆಲ್ ಮುಂತಾದ ದಿನಬಳಕೆ ಖರೀದಿಯಲ್ಲಿನ ಪರೋಕ್ಷ ತೆರಿಗೆಯನ್ನು ಹಿಂದೆಂದೂ ಕಾಣದಷ್ಟು ಏರಿಸಲಾಯಿತು.

ಈ ಮೇಲಿನ ಕಾರಣಗಳಿಂದಾಗಿ ದೇಶ ಕುಸಿದರೂ ಶ್ರೀಮಂತರು ಕುಸಿಯಲಿಲ್ಲ. ಇಷ್ಟಿದ್ದಾಗ್ಯೂ ಕೋವಿಡ್ ಕಾಲದಲ್ಲಿ ಶ್ರೀಮಂತರ ಮೇಲೆ ಹೆಚ್ಚು ತೆರಿಗೆ ಹಾಕುವ ಮನಸ್ಸು ನಮ್ಮ ಸರ್ಕಾರಕ್ಕೆ ಬರಲೇ ಇಲ್ಲ. ಹಲವರು ಶ್ರೀಮಂತರ ಪರವಾಗಿ ಮಾತನಾಡುತ್ತ ಕೋವಿಡ್ ಸಮಯದಲ್ಲಿ ಅವರು ಮಾಡಿದ ದಾನಗಳನ್ನು ಮುಂದಿಡುತ್ತಾರೆ. ಇಂತಹವರಿಗೆ ಸ್ಪಷ್ಟಪಡಿಸಬೇಕಾದ ವಿಷಯವೆಂದರೆ ಈ ಶ್ರೀಮಂತರು ಕೋವಿಡ್ ಸಮಯದಲ್ಲಿ ಮಾಡಿರುವ ಸಹಾಯ ಖಂಡಿತವಾಗಿಯೂ ದಾನವಲ್ಲ. ಕಾರ್ಪೊರೇಟ್ ಕಾಯ್ದೆ ಪ್ರಕಾರ ಶೇ.2ರಷ್ಟು (ಹಿಂದಿನ ಮೂರು ವರ್ಷಗಳ ಸರಾಸರಿ ಆದಾಯದಲ್ಲಿ) ಸಾಮಾಜಿಕ ಕಾರ್ಯಗಳಿಗೆ ಖರ್ಚು ಮಾಡಲೇಬೇಕಾದುದು ಕಾನೂನಾತ್ಮಕ ಕರ್ತವ್ಯ (ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ). ಇದಿಷ್ಟೇ ಅಲ್ಲದೆ ತೆರಿಗೆ ವಿನಾಯಿತಿ ಪಡೆಯಲೂ ಸಹ ಶ್ರೀಮಂತರು ಹಣವನ್ನು ಸಾರ್ವಜನಿಕ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ. ಹೀಗೆ ಸಹಾಯ ಮಾಡಿದ ಹಣ ಆಯಾ ಶ್ರೀಮಂತರ ಸಂಪತ್ತಿಗೆ ಹೋಲಿಸಿಕೊಂಡರೆ ತೀರಾ ಕಡಿಮೆ ಪ್ರಮಾಣದ್ದಾಗಿರುತ್ತದೆ. ಉದಾಹರಣೆಗೆ 2020ರಲ್ಲಿ ಕೋವಿಡ್ ಪರಿಹಾರಕ್ಕಾಗಿ ಮುಖೆಶ್ ಅಂಬಾನಿ ತಮ್ಮ 6 ಲಕ್ಷಕೋಟಿ ಸಂಪತ್ತಿನಿಂದ 458 ಕೋಟಿ (0.076%) ಖರ್ಚು ಮಾಡಿದ್ದರೆ, ಗೌತಮ್ ಅದಾನಿ ತಮ್ಮ 3.6 ಲಕ್ಷಕೋಟಿ ಸಂಪತ್ತಿನಿಂದ ಕೇವಲ 88 ಕೋಟಿ (0.024%) ಖರ್ಚು ಮಾಡಿದ್ದಾರೆ.

ಇವರಿಗೆ ಹೋಲಿಸಿಕೊಂಡರೆ ಲಾಕ್‌ಡೌನ್ ಸಂದರ್ಭದಲ್ಲಿ ಭಾರತ 1.5 ಲಕ್ಷಕೋಟಿಯನ್ನು ಕಳೆದುಕೊಂಡಿದೆ. ಇದರ ಅರ್ಥ ಭಾರತದ ಅಸಂಘಟಿತ ಕಾರ್ಮಿಕರು, ರೈತರು, ದಿನಗೂಲಿ ನೌಕರರು, ಮಧ್ಯಮ ಮತ್ತು ಬಡ ಜನರು ಭಾರತದೊಂದಿಗೆ ಪಾತಾಳಕ್ಕಿಳಿದಿದ್ದರೆ, ಅತಿಶ್ರೀಮಂತರು ಇದಕ್ಕೆ ವಿರುದ್ಧವಾಗಿ
ಆಕಾಶಕ್ಕೇರಿದ್ದಾರೆ!

ಹಾಗಾಗಿ ಕೋವಿಡ್ ಎರಡನೇ ಅಲೆಯು ಭಾರತವನ್ನು ಕಿತ್ತು ತಿನ್ನುತ್ತಿರುವಾಗ ಯಾವುದೇ ದೇಶಪ್ರೇಮಿ ಸರ್ಕಾರವು ಕೋವಿಡ್ ಕಾಲದಲ್ಲಿಯೂ ಹೆಚ್ಚು ಆದಾಯ ಗಳಿಸಿಕೊಂಡ ಅತಿಶ್ರೀಮಂತರ ಮೇಲೆ ಹೆಚ್ಚುವರಿಯಾಗಿ ’ಕೋವಿಡ್ ತೆರಿಗೆ’ ವಿಧಿಸಬೇಕಾಗುತ್ತದೆ. ಯುರೋಪ್ ದೇಶಗಳಿಗೆ ಅಲ್ಲಿನ ಆರ್ಥಿಕ ತಜ್ಞರೂ ಸಹ ಇದೇ ಸಲಹೆಯನ್ನು ನೀಡಿದ್ದಾರೆ. ಕರ್ನಾಟಕದಲ್ಲಿಯೂ ಸಹ ಇದರ ಬಗ್ಗೆ ಚರ್ಚೆಗಳಾಗಿವೆ. ದೇಶದ 953 ಅತಿಶ್ರೀಮಂತರ ಒಟ್ಟು ಸಂಪತ್ತು ಸುಮಾರು 50.3 ಲಕ್ಷಕೋಟಿ! ಭಾರತದ ಜಿಡಿಪಿಯ ಶೇ.26 ರಷ್ಟು ಸಂಪತ್ತು ಇವರ ಬಳಿ ಇದೆ. ಕನಿಷ್ಠ ಪಕ್ಷ ಇವರ ಮೇಲೆ ಶೇ.4 ರಷ್ಟಾದರೂ ’ಕೋವಿಡ್ ತೆರಿಗೆ’ ವಿಧಿಸಿದರೆ ಭಾರತ ಸರ್ಕಾರವು ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ. ಇದರಿಂದಾಗಿ ಅತಿಶ್ರೀಮಂತರು ಏನನ್ನೂ ಕಳೆದುಕೊಳ್ಳಲಾರರು. ಈ ಹಿಂದಿನ ಎಲ್ಲಾ ಸರ್ಕಾರಗಳು ನೀಡಿದ್ದ ಸೌಲಭ್ಯದಲ್ಲಿ ಒಂದಷ್ಟನ್ನು ಮರಳಿ ದೇಶಕ್ಕಾಗಿ ನೀಡುತ್ತಾರಷ್ಟೆ. ಆದರೆ ಅಂತಹ ದೊಡ್ಡ ಮನಸ್ಸನ್ನು ಖಂಡಿತವಾಗಿಯೂ ಅತಿಶ್ರೀಮಂತರು ಹೊಂದಿರುವುದು ಕಷ್ಟ. ಹಾಗಾಗಿ ಮೋದಿ ಸರ್ಕಾರವೇ ಭಾರತೀಯರನ್ನು ಹಾಗೂ ಜಾಗತಿಕವಾಗಿ ಭಾರತದ ಮಾನವನ್ನು ಉಳಿಸುವಷ್ಟು ದೇಶಪ್ರೇಮವನ್ನು ಹಾಗೂ ಧೈರ್ಯವನ್ನು ಪ್ರದರ್ಶಿಸಬೇಕಾಗಿದೆ.

ವಿಕಾಸ್‌ ಆರ್‌.ಮೌರ್ಯ

ವಿಕಾಸ್ ಆರ್ ಮೌರ್‍ಯ
ಕನ್ನಡದಲ್ಲಿ ದಲಿತ ಸೈದ್ಧಾಂತಿಕ ಪ್ರಜ್ಞೆಯನ್ನು ತನ್ನ ಬರಹ ಮತ್ತು ಹೋರಾಟದ ಮೂಲಕ ವಿಸ್ತರಿಸುತ್ತಿರುವ ಹೊಸ ತಲೆಮಾರಿನ ಬರಹಗಾರ ಮತ್ತು ಹೋರಾಟಗಾರ ವಿಕಾಸ್ ಆರ್ ಮೌರ್ಯ. ಗಣಿತ ಸ್ನಾತಕೋತ್ತರ ಪದವಿ ಮುಗಿಸಿರುವ ವಿಕಾಸ್ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಚಮ್ಮಟಿಕೆ’ ಪ್ರಕಟಿತ ಕೃತಿ


ಇದನ್ನೂ ಓದಿ: ಲ್ಯುಟಿನ್ಸ್ ದೆಹಲಿಯ ಐಶಾರಾಮದ ಬಗ್ಗೆ ಗೇಲಿ; ಸಾವಿನ ಸರಣಿಯ ಮಧ್ಯೆ 20 ಸಾವಿರ ಕೋಟಿ ಮಹಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...