Homeಕರೋನಾ ತಲ್ಲಣಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ಅಕ್ಷರಶಃ ಸ್ಮಶಾನವನ್ನಾಗಿಸಿದೆ. ದೇಶದ ಆರೋಗ್ಯ ವ್ಯವಸ್ಥೆಯ ಕಳಪೆ ಮಟ್ಟವನ್ನು ಜಗಜ್ಜಾಹೀರುಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿತನವನ್ನು ಬಯಲುಗೊಳಿಸಿದೆ. ಕಳೆದ ಆರು ವರ್ಷಗಳಲ್ಲಿ ಕೈಗೊಂಡ ಮುಂದಾಲೋಚನಾ ರಹಿತ ನೋಟುರದ್ದತಿ, ಜಿಎಸ್‌ಟಿ, ಕೋವಿಡ್ ಲಾಕ್‌ಡೌನ್‌ಗಳಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿಯು ಐಸಿಯುನಲ್ಲಿದೆ. ಇದರ ಪರಿಣಾಮವಾಗಿ ಕಳೆದ ಒಂದೂವರೆ ವರ್ಷದಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಇಲ್ಲ. ಹಲವು ರಾಜ್ಯ ಸರ್ಕಾರಗಳ ನೌಕರರ ಸಂಬಳದಲ್ಲಿ ಕಡಿತಗೊಳಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನೂರರ ಗಡಿ ಮುಟ್ಟಿದೆ. ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಪರೋಕ್ಷ ತೆರಿಗೆ ಆಕಾಶ ನೋಡುತ್ತಿದೆ. ಅಸಂಘಟಿತ ಶ್ರಮಿಕರಂತೂ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದೆಲ್ಲದರ ಪರಿಣಾಮವಾಗಿ ಭಾರತದ ಜಿಡಿಪಿ ದರ ಸಾರ್ವಕಾಲಿಕವಾಗಿ ಪಾತಾಳಕ್ಕಿಳಿದಿದೆ. ಇನ್ನೇನು ಚೇತರಿಸಿಕೊಳ್ಳುತ್ತಿರುವಾಗ ಮತ್ತೆ ಎರಡನೆಯ ಅಲೆ ಅಪ್ಪಳಿಸಿದೆ.

ಒಂದು ಕಡೆ ಭಾರತ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಸೋತು ಭಾರತೀಯರನ್ನು ಬೀದಿ ಹೆಣವಾಗಿಸುತ್ತಿದ್ದರೆ ಮತ್ತೊಂದು ಕಡೆಯಲ್ಲಿ ದೇಶದ ಅತಿ ಶ್ರೀಮಂತರು ಖಾಸಗಿ ಜೆಟ್ ವಿಮಾನಗಳಲ್ಲಿ ತಮ್ಮ ಕುಟುಂಬಗಳ ಸಮೇತ ವಿದೇಶಗಳಿಗೆ ಸುರಕ್ಷತೆಗಾಗಿ ಹಾರಿದ್ದಾರೆ. ಮತ್ತಷ್ಟು ಶ್ರೀಮಂತರು ತಮ್ಮ ಐಷಾರಾಮಿ ಕೋಟೆಗಳೊಳಗೆ ಸುರಕ್ಷಿತವಾಗಿದ್ದಾರೆ. ಆಶ್ಚರ್ಯವೆಂದರೆ, ಕೋವಿಡ್ ಕಾಲದಲ್ಲಿಯೂ ತಮ್ಮ ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ.

ಮೊದಲ ಕೋವಿಡ್ ಲಾಕ್‌ಡೌನ್‌ನಿಂದಾಗಿ ಇಡೀ ಭಾರತದ ಆರ್ಥಿಕ ಪರಿಸ್ಥಿತಿ ನೆಲಕ್ಕುರುಳಿತು. ಆದರೆ ಇದೇ ಸಮಯದಲ್ಲಿ ಭಾರತದಲ್ಲಿ ಹೆಚ್ಚುವರಿಯಾಗಿ ನಾಲ್ವರು ಶತಕೋಟ್ಯಾಧಿಪತಿಗಳು ಹುಟ್ಟಿಕೊಂಡರು. ಮುಖೆಶ್ ಅಂಬಾನಿಯ ಆದಾಯ ಶೇ.24 ರಷ್ಟು, ಗೌತಮ್ ಅದಾನಿಯ ಆದಾಯ ಶೇ.174 ರಷ್ಟು ಹೆಚ್ಚಾಯಿತು. ಇದೇ ರೀತಿ ಶೇ. 91 ರಷ್ಟು ಅತಿ ಶ್ರೀಮಂತರು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡಿದ್ದಾರೆ. ಭಾರತದಲ್ಲಿ 9,12,000 ದಶಲಕ್ಷಾಧಿಪತಿಗಳು ಹಾಗೂ 140 ಶತಕೋಟ್ಯಾಧಿಪತಿಗಳನ್ನು ಹೊಂದಿರುವ ಜಗತ್ತಿನ ಮೂರನೇ ರಾಷ್ಟ್ರ ಭಾರತವಾಗಿದೆ. ಒಟ್ಟಾರೆ 953 ಜನರು ತಮ್ಮ ವಾರ್ಷಿಕ ಸರಾಸರಿ ಆದಾಯವನ್ನು ತಲಾ 5,278 ಕೋಟಿಗಿಂತಲೂ ಹೆಚ್ಚು ಗಳಿಸಿ ಅತಿಶ್ರೀಮಂತರೆನಿಸಿಕೊಂಡಿದ್ದಾರೆ. ಭಾರತದ ಮೊದಲ ಹತ್ತು ಅತಿಶ್ರೀಮಂತರ ಒಟ್ಟು ಸಂಪತ್ತು ಬರೋಬ್ಬರಿ 12 ಲಕ್ಷಕೋಟಿ! ಅಷ್ಟೇ ಅಲ, 2025 ರಷ್ಟೊತ್ತಿಗೆ ಅತಿಶ್ರೀಮಂತರ ಜನಸಂಖ್ಯೆ ಶೇ.63ರಷ್ಟು ಹೆಚ್ಚಾಗಲಿದೆ. ಆಕ್ಸ್‌ಫಾಮ್ ವರದಿಯ ಪ್ರಕಾರ ದೇಶದ ಶೇ.10 ರಷ್ಟು ಶ್ರೀಮಂತರು ಶೇ.74ರಷ್ಟು ಸಂಪತ್ತನ್ನು ಹೊಂದಿದ್ದರೆ, ಇನ್ನುಳಿದ ಶೇ.90ರಷ್ಟು ಮೇಲ್ಮಧ್ಯಮ, ಮಧ್ಯಮ ಮತ್ತು ಬಡ ಭಾರತೀಯರು ಕೇವಲ ಶೇ.26ರಷ್ಟು ಸಂಪತ್ತನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಭಾರತದಲ್ಲಿ ಅತಿಶ್ರೀಮಂತರ ಮತ್ತು ಬಡವರ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಸಾಕ್ಷಿ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 94ಕ್ಕೆ ಕುಸಿದಿರುವುದು!

ಈ ಮೇಲಿನ ಮಾಹಿತಿಯಿಂದ 1. ಭಾರತದ ಆರ್ಥಿಕ ಕುಸಿತದ ಪರಿಣಾಮ ಭಾರತದವರೇ ಆದ ಶ್ರೀಮಂತರ ಮೇಲೆ ಬೀರುವುದಿಲ್ಲವೇ? 2. ಭಾರತದ ಜಿಡಿಪಿ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಅತಿ ಶ್ರೀಮಂತರ ಆಸ್ತಿ ಹೆಚ್ಚಾಗಲು ಕಾರಣವೇನು? ಎಂಬ ಪ್ರಶ್ನೆಗಳು ಮೂಡುತ್ತವೆ. ಇದಕ್ಕೆ ಉತ್ತರ ಸ್ಪಷ್ಟ. ಅದೇನೆಂದರೆ, ’ಭಾರತ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿರುವುದು ಹಾಗೂ ಶ್ರೀಮಂತರಿಗೆ ನೀಡುವ ವಿಶೇಷ ಸೌಲಭ್ಯಗಳು’. ಭಾರತವು ಮೊದಲ ಕೋವಿಡ್ ಅಲೆಯ ಹೊಸ್ತಿಲಲ್ಲಿದ್ದಾಗ, ನೋಟು ರದ್ದತಿಯ ಹಾನಿಯನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ಶೇ೩೦ರಿಂದ ಶೇ.22ಕ್ಕೆ ಇಳಿಸಿತು. ನೂತನ ಕಂಪೆನಿಗಳ ತೆರಿಗೆಯನ್ನು ಶೇ.25ರಿಂದ ಶೇ.15ಕ್ಕೆ ಇಳಿಸಿತು. ಇದರಿಂದಾಗಿ 2019-20ನೇ ಸಾಲಿನಲ್ಲಿ ಶ್ರೀಮಂತರಿಗೆ 1.5 ಲಕ್ಷ ಕೋಟಿ ಲಾಭವಾಯಿತು. ಅಷ್ಟೇ ಪ್ರಮಾಣದ ನಷ್ಟ ಸಾರ್ವಜನಿಕ ಖಜಾನೆಗಾಯಿತು. ಇದಕ್ಕೂ ಮುಂಚೆ 2016ರಲ್ಲಿಯೇ ಮೋದಿ ಸರ್ಕಾರ ’ಸಂಪತ್ತಿನ ತೆರಿಗೆ’ಯನ್ನೇ ರದ್ದುಗೊಳಿಸಿತ್ತು.

ಇದರಿಂದಾಗಿ ಕ್ರಮೇಣ ಭಾರತ ಸರ್ಕಾರದ ಖಜಾನೆಗೆ ಪ್ರತ್ಯಕ್ಷ ತೆರಿಗೆಯ ಪಾಲು ಕಡಿಮೆಯಾಯಿತು. ಈ ಹಾನಿಯನ್ನು ತಪ್ಪಿಸಿಕೊಳ್ಳಲು ಸಾಮಾನ್ಯ ಜನರ ಮೇಲೆ ಪೆಟ್ರೋಲ್, ಡೀಸೆಲ್ ಮುಂತಾದ ದಿನಬಳಕೆ ಖರೀದಿಯಲ್ಲಿನ ಪರೋಕ್ಷ ತೆರಿಗೆಯನ್ನು ಹಿಂದೆಂದೂ ಕಾಣದಷ್ಟು ಏರಿಸಲಾಯಿತು.

ಈ ಮೇಲಿನ ಕಾರಣಗಳಿಂದಾಗಿ ದೇಶ ಕುಸಿದರೂ ಶ್ರೀಮಂತರು ಕುಸಿಯಲಿಲ್ಲ. ಇಷ್ಟಿದ್ದಾಗ್ಯೂ ಕೋವಿಡ್ ಕಾಲದಲ್ಲಿ ಶ್ರೀಮಂತರ ಮೇಲೆ ಹೆಚ್ಚು ತೆರಿಗೆ ಹಾಕುವ ಮನಸ್ಸು ನಮ್ಮ ಸರ್ಕಾರಕ್ಕೆ ಬರಲೇ ಇಲ್ಲ. ಹಲವರು ಶ್ರೀಮಂತರ ಪರವಾಗಿ ಮಾತನಾಡುತ್ತ ಕೋವಿಡ್ ಸಮಯದಲ್ಲಿ ಅವರು ಮಾಡಿದ ದಾನಗಳನ್ನು ಮುಂದಿಡುತ್ತಾರೆ. ಇಂತಹವರಿಗೆ ಸ್ಪಷ್ಟಪಡಿಸಬೇಕಾದ ವಿಷಯವೆಂದರೆ ಈ ಶ್ರೀಮಂತರು ಕೋವಿಡ್ ಸಮಯದಲ್ಲಿ ಮಾಡಿರುವ ಸಹಾಯ ಖಂಡಿತವಾಗಿಯೂ ದಾನವಲ್ಲ. ಕಾರ್ಪೊರೇಟ್ ಕಾಯ್ದೆ ಪ್ರಕಾರ ಶೇ.2ರಷ್ಟು (ಹಿಂದಿನ ಮೂರು ವರ್ಷಗಳ ಸರಾಸರಿ ಆದಾಯದಲ್ಲಿ) ಸಾಮಾಜಿಕ ಕಾರ್ಯಗಳಿಗೆ ಖರ್ಚು ಮಾಡಲೇಬೇಕಾದುದು ಕಾನೂನಾತ್ಮಕ ಕರ್ತವ್ಯ (ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ). ಇದಿಷ್ಟೇ ಅಲ್ಲದೆ ತೆರಿಗೆ ವಿನಾಯಿತಿ ಪಡೆಯಲೂ ಸಹ ಶ್ರೀಮಂತರು ಹಣವನ್ನು ಸಾರ್ವಜನಿಕ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ. ಹೀಗೆ ಸಹಾಯ ಮಾಡಿದ ಹಣ ಆಯಾ ಶ್ರೀಮಂತರ ಸಂಪತ್ತಿಗೆ ಹೋಲಿಸಿಕೊಂಡರೆ ತೀರಾ ಕಡಿಮೆ ಪ್ರಮಾಣದ್ದಾಗಿರುತ್ತದೆ. ಉದಾಹರಣೆಗೆ 2020ರಲ್ಲಿ ಕೋವಿಡ್ ಪರಿಹಾರಕ್ಕಾಗಿ ಮುಖೆಶ್ ಅಂಬಾನಿ ತಮ್ಮ 6 ಲಕ್ಷಕೋಟಿ ಸಂಪತ್ತಿನಿಂದ 458 ಕೋಟಿ (0.076%) ಖರ್ಚು ಮಾಡಿದ್ದರೆ, ಗೌತಮ್ ಅದಾನಿ ತಮ್ಮ 3.6 ಲಕ್ಷಕೋಟಿ ಸಂಪತ್ತಿನಿಂದ ಕೇವಲ 88 ಕೋಟಿ (0.024%) ಖರ್ಚು ಮಾಡಿದ್ದಾರೆ.

ಇವರಿಗೆ ಹೋಲಿಸಿಕೊಂಡರೆ ಲಾಕ್‌ಡೌನ್ ಸಂದರ್ಭದಲ್ಲಿ ಭಾರತ 1.5 ಲಕ್ಷಕೋಟಿಯನ್ನು ಕಳೆದುಕೊಂಡಿದೆ. ಇದರ ಅರ್ಥ ಭಾರತದ ಅಸಂಘಟಿತ ಕಾರ್ಮಿಕರು, ರೈತರು, ದಿನಗೂಲಿ ನೌಕರರು, ಮಧ್ಯಮ ಮತ್ತು ಬಡ ಜನರು ಭಾರತದೊಂದಿಗೆ ಪಾತಾಳಕ್ಕಿಳಿದಿದ್ದರೆ, ಅತಿಶ್ರೀಮಂತರು ಇದಕ್ಕೆ ವಿರುದ್ಧವಾಗಿ
ಆಕಾಶಕ್ಕೇರಿದ್ದಾರೆ!

ಹಾಗಾಗಿ ಕೋವಿಡ್ ಎರಡನೇ ಅಲೆಯು ಭಾರತವನ್ನು ಕಿತ್ತು ತಿನ್ನುತ್ತಿರುವಾಗ ಯಾವುದೇ ದೇಶಪ್ರೇಮಿ ಸರ್ಕಾರವು ಕೋವಿಡ್ ಕಾಲದಲ್ಲಿಯೂ ಹೆಚ್ಚು ಆದಾಯ ಗಳಿಸಿಕೊಂಡ ಅತಿಶ್ರೀಮಂತರ ಮೇಲೆ ಹೆಚ್ಚುವರಿಯಾಗಿ ’ಕೋವಿಡ್ ತೆರಿಗೆ’ ವಿಧಿಸಬೇಕಾಗುತ್ತದೆ. ಯುರೋಪ್ ದೇಶಗಳಿಗೆ ಅಲ್ಲಿನ ಆರ್ಥಿಕ ತಜ್ಞರೂ ಸಹ ಇದೇ ಸಲಹೆಯನ್ನು ನೀಡಿದ್ದಾರೆ. ಕರ್ನಾಟಕದಲ್ಲಿಯೂ ಸಹ ಇದರ ಬಗ್ಗೆ ಚರ್ಚೆಗಳಾಗಿವೆ. ದೇಶದ 953 ಅತಿಶ್ರೀಮಂತರ ಒಟ್ಟು ಸಂಪತ್ತು ಸುಮಾರು 50.3 ಲಕ್ಷಕೋಟಿ! ಭಾರತದ ಜಿಡಿಪಿಯ ಶೇ.26 ರಷ್ಟು ಸಂಪತ್ತು ಇವರ ಬಳಿ ಇದೆ. ಕನಿಷ್ಠ ಪಕ್ಷ ಇವರ ಮೇಲೆ ಶೇ.4 ರಷ್ಟಾದರೂ ’ಕೋವಿಡ್ ತೆರಿಗೆ’ ವಿಧಿಸಿದರೆ ಭಾರತ ಸರ್ಕಾರವು ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ. ಇದರಿಂದಾಗಿ ಅತಿಶ್ರೀಮಂತರು ಏನನ್ನೂ ಕಳೆದುಕೊಳ್ಳಲಾರರು. ಈ ಹಿಂದಿನ ಎಲ್ಲಾ ಸರ್ಕಾರಗಳು ನೀಡಿದ್ದ ಸೌಲಭ್ಯದಲ್ಲಿ ಒಂದಷ್ಟನ್ನು ಮರಳಿ ದೇಶಕ್ಕಾಗಿ ನೀಡುತ್ತಾರಷ್ಟೆ. ಆದರೆ ಅಂತಹ ದೊಡ್ಡ ಮನಸ್ಸನ್ನು ಖಂಡಿತವಾಗಿಯೂ ಅತಿಶ್ರೀಮಂತರು ಹೊಂದಿರುವುದು ಕಷ್ಟ. ಹಾಗಾಗಿ ಮೋದಿ ಸರ್ಕಾರವೇ ಭಾರತೀಯರನ್ನು ಹಾಗೂ ಜಾಗತಿಕವಾಗಿ ಭಾರತದ ಮಾನವನ್ನು ಉಳಿಸುವಷ್ಟು ದೇಶಪ್ರೇಮವನ್ನು ಹಾಗೂ ಧೈರ್ಯವನ್ನು ಪ್ರದರ್ಶಿಸಬೇಕಾಗಿದೆ.

ವಿಕಾಸ್‌ ಆರ್‌.ಮೌರ್ಯ

ವಿಕಾಸ್ ಆರ್ ಮೌರ್‍ಯ
ಕನ್ನಡದಲ್ಲಿ ದಲಿತ ಸೈದ್ಧಾಂತಿಕ ಪ್ರಜ್ಞೆಯನ್ನು ತನ್ನ ಬರಹ ಮತ್ತು ಹೋರಾಟದ ಮೂಲಕ ವಿಸ್ತರಿಸುತ್ತಿರುವ ಹೊಸ ತಲೆಮಾರಿನ ಬರಹಗಾರ ಮತ್ತು ಹೋರಾಟಗಾರ ವಿಕಾಸ್ ಆರ್ ಮೌರ್ಯ. ಗಣಿತ ಸ್ನಾತಕೋತ್ತರ ಪದವಿ ಮುಗಿಸಿರುವ ವಿಕಾಸ್ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಚಮ್ಮಟಿಕೆ’ ಪ್ರಕಟಿತ ಕೃತಿ


ಇದನ್ನೂ ಓದಿ: ಲ್ಯುಟಿನ್ಸ್ ದೆಹಲಿಯ ಐಶಾರಾಮದ ಬಗ್ಗೆ ಗೇಲಿ; ಸಾವಿನ ಸರಣಿಯ ಮಧ್ಯೆ 20 ಸಾವಿರ ಕೋಟಿ ಮಹಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...