Homeಕರ್ನಾಟಕ‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ, ಸಮುದಾಯದ ಭಾವನೆಗೆ ಧಕ್ಕೆ ತರಬಾರದು’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು

- Advertisement -
- Advertisement -

“ಟಿಪ್ಪುವನ್ನು ಕೊಂದದ್ದು ಉರಿಗೌಡ, ನಂಜೇಗೌಡ ಎಂಬುದು ಕಾಲ್ಪನಿಕ ಎನ್ನುವವರು ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಪ್ರತಿಕ್ರಿಯಿಸಿ, “ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ” ಎಂದಿದ್ದರು.

ಮುಂದುವರಿದು ಶ್ರೀಗಳು, “ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು” ಎಂದು ತಿಳಿಸಿದ್ದರು.

ಈ ಬೆಳವಣಿಗೆಗಳ ಬೆನ್ನಲ್ಲೇ ಸಿ.ಟಿ.ರವಿ ಹೇಳಿಕೆಯನ್ನು ನೀಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಂಗಳವಾರ ಮಾತನಾಡಿದ ಅವರು, “ಟಿಪ್ಪು ಕೊಂದಿದ್ದ ಉರಿಗೌಡ ನಂಜೇಗೌಡರ ದಾಖಲೆ ಸಂಗ್ರಹ ಮಾಡ್ತಿದ್ದೇವೆ. ಶೀಘ್ರದಲ್ಲೇ ಆದಿಚುಂಚನಗಿರಿ ಶ್ರೀಗಳ ಮುಂದೆ ದಾಖಲೆ ಇಟ್ಟು ಅವರಿಗೆ ಸತ್ಯ ಮನವರಿಕೆ ಮಾಡುತ್ತೇವೆ” ಎಂದಿದ್ದಾರೆ.

“ಉರಿಗೌಡ ಮತ್ತು ನಂಜೇಗೌಡ ಅವರು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಎಂದು ದೇ. ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ದಾಖಲಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಕೊಂದಿದ್ದಕ್ಕೆ ದಾಖಲೆ ಏನಿದೆ ಅಂತ ಹೊಸ ವರಸೆ ತೆಗೆದಿದ್ದಾರೆ. ಇದು ಸಂಶೋಧನೆ ಆಗಬೇಕಾಗಿರುವ ವಿಷಯ. ಟಿಪ್ಪು ಕೊಂದವರು ಯಾರು. ಟಿಪ್ಪು ಕೊಂದವರು ಅಪರಿಚಿತರು ಅಂತಾರೆ. ನಾವು ಅಪರಿಚಿತರಲ್ಲ ಅಂತ ಹೇಳಿದಿವಿ‌. ಉರಿಗೌಡ, ನಂಜೇಗೌಡರನ್ನ ಇವತ್ತಿನವರೆಗೂ ಇವರೆ ಸೃಷ್ಟಿ ಮಾಡಿದ್ದಾರೆ ಅಂತ ಹೇಳ್ಕೊಂಡು ಬಂದಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಸ್ವಾಮೀಜಿಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಸ್ವಾಮೀಜಿ ಅವರಿಗೆ ವಾಸ್ತವಿಕ ಸತ್ಯವನ್ನ ಮನವರಿಕೆ ಮಾಡಿಕೊಡುತ್ತೇವೆ. ಖಂಡಿತ ದಾಖಲೆ ತಗೊಂಡು ಹೋಗುತ್ತೇವೆ. ಸದ್ಯ ದಾಖಲೆ ಸಂಗ್ರಹಿಸೊ ಕೆಲಸ ಮಾಡ್ತಿದ್ದೇವೆ. ಆ ದಾಖಲೆ ಮುಂದಿಟ್ಟುಕೊಂಡು ಸ್ವಾಮೀಜಿ ಬಳಿ ಚರ್ಚೆ ಮಾಡುತ್ತೇವೆ. ಸ್ವಾಮೀಜಿ ಅವರ ಬಗ್ಗೆ ಶ್ರದ್ದೆ ಗೌರವ ನಮಗೆ ಇದೆ” ಎಂದಿದ್ದಾರೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

“ಟಿಪ್ಪು ಮತ್ತು ಉರಿಗೌಡ ನಂಜೇಗೌಡರ ಚರ್ಚೆ ಮುಂದುವರೆಸುತ್ತೇವೆ. ನನನ್ನು ಯಾರಿಗೆ ಬೇಕಾದರೂ ಹೋಲಿಕೆ ಮಾಡಿ, ಐಲೆಟ್ ಮಾಡಿ, ನನಗೆ ಹೆಮ್ಮೆ ಇದೆ. ಉರಿಗೌಡ ನಂಜೇಗೌಡ ಅವರು ಮೈಸೂರು ಸಂಸ್ಥಾನಕ್ಕೆ ನಿಷ್ಠಾವಂತರಾಗಿದ್ದರು. ಅನ್ನೋದಕ್ಕೆ ಹೆಮ್ಮೆ ಇದೆ. ಚುನಾವಣೆ ಇರುವುದರಿಂದ ಉರಿಗೌಡ, ನಂಜೇಗೌಡ ವಿಚಾರ ಬೇರೆ ಬೇರೆ ತಿರುವು ಪಡೆಯುತ್ತಿದೆ. ಆ ರೀತಿ ಆಗಬಾರದು ಅನ್ನೋ ದೃಷ್ಟಿಯಿಂದ ಸ್ವಾಮೀಜಿಗಳು ತಿಳಿ ಹೇಳಿದ್ದಾರೆ” ಎಂದಿದ್ದಾರೆ.

“ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಎಚ್‌ಡಿ ಕುಮಾರಸ್ವಾಮಿ ಕ್ಷಮೆಯಾಚಿಸಬೇಕು. ಕುಮಾರಸ್ವಾಮಿಯವರು ಸ್ವಾಮೀಜಿ ಅಪಮಾನ ಮಾಡಿದ್ದಾರೆ, ಅಗೌರವ ತೋರಿದ್ದಾರೆ. ವಾಸ್ತವವಾಗಿ ಟಿಪ್ಪು ಸುಲ್ತಾನ್ ಸ್ವಾತಂತ್ರ ಹೋರಾಟಗಾರ ಅಲ್ಲ. ಮೈಸೂರು ಸಂಸ್ಥಾನಕ್ಕೆ ಮೋಸ ಮಾಡಿದವನು ಅಂತ ಬಿಂಬಿಸಬೇಕಿತ್ತು. ವ್ಯಾಪಾರದ ನೆಪದಲ್ಲಿ ಬಂದಿದ್ದು ಅಂತ ಬ್ರಿಟಿಷರನ್ನ ಚಿತ್ರೀಕರಿಸಿದ್ವಿ. ಹಾಗೆ ಕೂಲಿ ಹಾಗೆ ಬಂದವನು ಮೋಸದಿಂದ ಮೈಸೂರು ಸಂಸ್ಥಾನವನ್ನೆ ಕಬಳಿಸಿದ ಅಂತ ನಾವು ಎಲ್ಲಿ ಹೇಳಿದಿವಿ” ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...