Homeಕರ್ನಾಟಕ‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ, ಸಮುದಾಯದ ಭಾವನೆಗೆ ಧಕ್ಕೆ ತರಬಾರದು’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು

- Advertisement -
- Advertisement -

“ಟಿಪ್ಪುವನ್ನು ಕೊಂದದ್ದು ಉರಿಗೌಡ, ನಂಜೇಗೌಡ ಎಂಬುದು ಕಾಲ್ಪನಿಕ ಎನ್ನುವವರು ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಪ್ರತಿಕ್ರಿಯಿಸಿ, “ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ” ಎಂದಿದ್ದರು.

ಮುಂದುವರಿದು ಶ್ರೀಗಳು, “ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು” ಎಂದು ತಿಳಿಸಿದ್ದರು.

ಈ ಬೆಳವಣಿಗೆಗಳ ಬೆನ್ನಲ್ಲೇ ಸಿ.ಟಿ.ರವಿ ಹೇಳಿಕೆಯನ್ನು ನೀಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಂಗಳವಾರ ಮಾತನಾಡಿದ ಅವರು, “ಟಿಪ್ಪು ಕೊಂದಿದ್ದ ಉರಿಗೌಡ ನಂಜೇಗೌಡರ ದಾಖಲೆ ಸಂಗ್ರಹ ಮಾಡ್ತಿದ್ದೇವೆ. ಶೀಘ್ರದಲ್ಲೇ ಆದಿಚುಂಚನಗಿರಿ ಶ್ರೀಗಳ ಮುಂದೆ ದಾಖಲೆ ಇಟ್ಟು ಅವರಿಗೆ ಸತ್ಯ ಮನವರಿಕೆ ಮಾಡುತ್ತೇವೆ” ಎಂದಿದ್ದಾರೆ.

“ಉರಿಗೌಡ ಮತ್ತು ನಂಜೇಗೌಡ ಅವರು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಎಂದು ದೇ. ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ದಾಖಲಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಕೊಂದಿದ್ದಕ್ಕೆ ದಾಖಲೆ ಏನಿದೆ ಅಂತ ಹೊಸ ವರಸೆ ತೆಗೆದಿದ್ದಾರೆ. ಇದು ಸಂಶೋಧನೆ ಆಗಬೇಕಾಗಿರುವ ವಿಷಯ. ಟಿಪ್ಪು ಕೊಂದವರು ಯಾರು. ಟಿಪ್ಪು ಕೊಂದವರು ಅಪರಿಚಿತರು ಅಂತಾರೆ. ನಾವು ಅಪರಿಚಿತರಲ್ಲ ಅಂತ ಹೇಳಿದಿವಿ‌. ಉರಿಗೌಡ, ನಂಜೇಗೌಡರನ್ನ ಇವತ್ತಿನವರೆಗೂ ಇವರೆ ಸೃಷ್ಟಿ ಮಾಡಿದ್ದಾರೆ ಅಂತ ಹೇಳ್ಕೊಂಡು ಬಂದಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಸ್ವಾಮೀಜಿಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಸ್ವಾಮೀಜಿ ಅವರಿಗೆ ವಾಸ್ತವಿಕ ಸತ್ಯವನ್ನ ಮನವರಿಕೆ ಮಾಡಿಕೊಡುತ್ತೇವೆ. ಖಂಡಿತ ದಾಖಲೆ ತಗೊಂಡು ಹೋಗುತ್ತೇವೆ. ಸದ್ಯ ದಾಖಲೆ ಸಂಗ್ರಹಿಸೊ ಕೆಲಸ ಮಾಡ್ತಿದ್ದೇವೆ. ಆ ದಾಖಲೆ ಮುಂದಿಟ್ಟುಕೊಂಡು ಸ್ವಾಮೀಜಿ ಬಳಿ ಚರ್ಚೆ ಮಾಡುತ್ತೇವೆ. ಸ್ವಾಮೀಜಿ ಅವರ ಬಗ್ಗೆ ಶ್ರದ್ದೆ ಗೌರವ ನಮಗೆ ಇದೆ” ಎಂದಿದ್ದಾರೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

“ಟಿಪ್ಪು ಮತ್ತು ಉರಿಗೌಡ ನಂಜೇಗೌಡರ ಚರ್ಚೆ ಮುಂದುವರೆಸುತ್ತೇವೆ. ನನನ್ನು ಯಾರಿಗೆ ಬೇಕಾದರೂ ಹೋಲಿಕೆ ಮಾಡಿ, ಐಲೆಟ್ ಮಾಡಿ, ನನಗೆ ಹೆಮ್ಮೆ ಇದೆ. ಉರಿಗೌಡ ನಂಜೇಗೌಡ ಅವರು ಮೈಸೂರು ಸಂಸ್ಥಾನಕ್ಕೆ ನಿಷ್ಠಾವಂತರಾಗಿದ್ದರು. ಅನ್ನೋದಕ್ಕೆ ಹೆಮ್ಮೆ ಇದೆ. ಚುನಾವಣೆ ಇರುವುದರಿಂದ ಉರಿಗೌಡ, ನಂಜೇಗೌಡ ವಿಚಾರ ಬೇರೆ ಬೇರೆ ತಿರುವು ಪಡೆಯುತ್ತಿದೆ. ಆ ರೀತಿ ಆಗಬಾರದು ಅನ್ನೋ ದೃಷ್ಟಿಯಿಂದ ಸ್ವಾಮೀಜಿಗಳು ತಿಳಿ ಹೇಳಿದ್ದಾರೆ” ಎಂದಿದ್ದಾರೆ.

“ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಎಚ್‌ಡಿ ಕುಮಾರಸ್ವಾಮಿ ಕ್ಷಮೆಯಾಚಿಸಬೇಕು. ಕುಮಾರಸ್ವಾಮಿಯವರು ಸ್ವಾಮೀಜಿ ಅಪಮಾನ ಮಾಡಿದ್ದಾರೆ, ಅಗೌರವ ತೋರಿದ್ದಾರೆ. ವಾಸ್ತವವಾಗಿ ಟಿಪ್ಪು ಸುಲ್ತಾನ್ ಸ್ವಾತಂತ್ರ ಹೋರಾಟಗಾರ ಅಲ್ಲ. ಮೈಸೂರು ಸಂಸ್ಥಾನಕ್ಕೆ ಮೋಸ ಮಾಡಿದವನು ಅಂತ ಬಿಂಬಿಸಬೇಕಿತ್ತು. ವ್ಯಾಪಾರದ ನೆಪದಲ್ಲಿ ಬಂದಿದ್ದು ಅಂತ ಬ್ರಿಟಿಷರನ್ನ ಚಿತ್ರೀಕರಿಸಿದ್ವಿ. ಹಾಗೆ ಕೂಲಿ ಹಾಗೆ ಬಂದವನು ಮೋಸದಿಂದ ಮೈಸೂರು ಸಂಸ್ಥಾನವನ್ನೆ ಕಬಳಿಸಿದ ಅಂತ ನಾವು ಎಲ್ಲಿ ಹೇಳಿದಿವಿ” ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....