Homeಕರ್ನಾಟಕ‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ, ಸಮುದಾಯದ ಭಾವನೆಗೆ ಧಕ್ಕೆ ತರಬಾರದು’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು

- Advertisement -
- Advertisement -

“ಟಿಪ್ಪುವನ್ನು ಕೊಂದದ್ದು ಉರಿಗೌಡ, ನಂಜೇಗೌಡ ಎಂಬುದು ಕಾಲ್ಪನಿಕ ಎನ್ನುವವರು ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಪ್ರತಿಕ್ರಿಯಿಸಿ, “ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ” ಎಂದಿದ್ದರು.

ಮುಂದುವರಿದು ಶ್ರೀಗಳು, “ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು” ಎಂದು ತಿಳಿಸಿದ್ದರು.

ಈ ಬೆಳವಣಿಗೆಗಳ ಬೆನ್ನಲ್ಲೇ ಸಿ.ಟಿ.ರವಿ ಹೇಳಿಕೆಯನ್ನು ನೀಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಂಗಳವಾರ ಮಾತನಾಡಿದ ಅವರು, “ಟಿಪ್ಪು ಕೊಂದಿದ್ದ ಉರಿಗೌಡ ನಂಜೇಗೌಡರ ದಾಖಲೆ ಸಂಗ್ರಹ ಮಾಡ್ತಿದ್ದೇವೆ. ಶೀಘ್ರದಲ್ಲೇ ಆದಿಚುಂಚನಗಿರಿ ಶ್ರೀಗಳ ಮುಂದೆ ದಾಖಲೆ ಇಟ್ಟು ಅವರಿಗೆ ಸತ್ಯ ಮನವರಿಕೆ ಮಾಡುತ್ತೇವೆ” ಎಂದಿದ್ದಾರೆ.

“ಉರಿಗೌಡ ಮತ್ತು ನಂಜೇಗೌಡ ಅವರು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಎಂದು ದೇ. ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ದಾಖಲಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಕೊಂದಿದ್ದಕ್ಕೆ ದಾಖಲೆ ಏನಿದೆ ಅಂತ ಹೊಸ ವರಸೆ ತೆಗೆದಿದ್ದಾರೆ. ಇದು ಸಂಶೋಧನೆ ಆಗಬೇಕಾಗಿರುವ ವಿಷಯ. ಟಿಪ್ಪು ಕೊಂದವರು ಯಾರು. ಟಿಪ್ಪು ಕೊಂದವರು ಅಪರಿಚಿತರು ಅಂತಾರೆ. ನಾವು ಅಪರಿಚಿತರಲ್ಲ ಅಂತ ಹೇಳಿದಿವಿ‌. ಉರಿಗೌಡ, ನಂಜೇಗೌಡರನ್ನ ಇವತ್ತಿನವರೆಗೂ ಇವರೆ ಸೃಷ್ಟಿ ಮಾಡಿದ್ದಾರೆ ಅಂತ ಹೇಳ್ಕೊಂಡು ಬಂದಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಸ್ವಾಮೀಜಿಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಸ್ವಾಮೀಜಿ ಅವರಿಗೆ ವಾಸ್ತವಿಕ ಸತ್ಯವನ್ನ ಮನವರಿಕೆ ಮಾಡಿಕೊಡುತ್ತೇವೆ. ಖಂಡಿತ ದಾಖಲೆ ತಗೊಂಡು ಹೋಗುತ್ತೇವೆ. ಸದ್ಯ ದಾಖಲೆ ಸಂಗ್ರಹಿಸೊ ಕೆಲಸ ಮಾಡ್ತಿದ್ದೇವೆ. ಆ ದಾಖಲೆ ಮುಂದಿಟ್ಟುಕೊಂಡು ಸ್ವಾಮೀಜಿ ಬಳಿ ಚರ್ಚೆ ಮಾಡುತ್ತೇವೆ. ಸ್ವಾಮೀಜಿ ಅವರ ಬಗ್ಗೆ ಶ್ರದ್ದೆ ಗೌರವ ನಮಗೆ ಇದೆ” ಎಂದಿದ್ದಾರೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

“ಟಿಪ್ಪು ಮತ್ತು ಉರಿಗೌಡ ನಂಜೇಗೌಡರ ಚರ್ಚೆ ಮುಂದುವರೆಸುತ್ತೇವೆ. ನನನ್ನು ಯಾರಿಗೆ ಬೇಕಾದರೂ ಹೋಲಿಕೆ ಮಾಡಿ, ಐಲೆಟ್ ಮಾಡಿ, ನನಗೆ ಹೆಮ್ಮೆ ಇದೆ. ಉರಿಗೌಡ ನಂಜೇಗೌಡ ಅವರು ಮೈಸೂರು ಸಂಸ್ಥಾನಕ್ಕೆ ನಿಷ್ಠಾವಂತರಾಗಿದ್ದರು. ಅನ್ನೋದಕ್ಕೆ ಹೆಮ್ಮೆ ಇದೆ. ಚುನಾವಣೆ ಇರುವುದರಿಂದ ಉರಿಗೌಡ, ನಂಜೇಗೌಡ ವಿಚಾರ ಬೇರೆ ಬೇರೆ ತಿರುವು ಪಡೆಯುತ್ತಿದೆ. ಆ ರೀತಿ ಆಗಬಾರದು ಅನ್ನೋ ದೃಷ್ಟಿಯಿಂದ ಸ್ವಾಮೀಜಿಗಳು ತಿಳಿ ಹೇಳಿದ್ದಾರೆ” ಎಂದಿದ್ದಾರೆ.

“ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಎಚ್‌ಡಿ ಕುಮಾರಸ್ವಾಮಿ ಕ್ಷಮೆಯಾಚಿಸಬೇಕು. ಕುಮಾರಸ್ವಾಮಿಯವರು ಸ್ವಾಮೀಜಿ ಅಪಮಾನ ಮಾಡಿದ್ದಾರೆ, ಅಗೌರವ ತೋರಿದ್ದಾರೆ. ವಾಸ್ತವವಾಗಿ ಟಿಪ್ಪು ಸುಲ್ತಾನ್ ಸ್ವಾತಂತ್ರ ಹೋರಾಟಗಾರ ಅಲ್ಲ. ಮೈಸೂರು ಸಂಸ್ಥಾನಕ್ಕೆ ಮೋಸ ಮಾಡಿದವನು ಅಂತ ಬಿಂಬಿಸಬೇಕಿತ್ತು. ವ್ಯಾಪಾರದ ನೆಪದಲ್ಲಿ ಬಂದಿದ್ದು ಅಂತ ಬ್ರಿಟಿಷರನ್ನ ಚಿತ್ರೀಕರಿಸಿದ್ವಿ. ಹಾಗೆ ಕೂಲಿ ಹಾಗೆ ಬಂದವನು ಮೋಸದಿಂದ ಮೈಸೂರು ಸಂಸ್ಥಾನವನ್ನೆ ಕಬಳಿಸಿದ ಅಂತ ನಾವು ಎಲ್ಲಿ ಹೇಳಿದಿವಿ” ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...