Homeಮುಖಪುಟಉರಿಗೌಡ - ನಂಜೇಗೌಡ ಸುಳ್ಳು ಎಂದ ನಟ ಚೇತನ್ ಬಂಧನ: ವ್ಯಾಪಕ ಆಕ್ರೋಶ

ಉರಿಗೌಡ – ನಂಜೇಗೌಡ ಸುಳ್ಳು ಎಂದ ನಟ ಚೇತನ್ ಬಂಧನ: ವ್ಯಾಪಕ ಆಕ್ರೋಶ

- Advertisement -
- Advertisement -

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ, ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎಂಬುದು ಸುಳ್ಳು ಎಂದು ಪೋಸ್ಟ್ ಹಾಕಿದ್ದಕ್ಕೆ ನಟ ಚೇತನ್‌ರವರನ್ನು ಬಂಧಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

“ಯಾವ ಆಯಾಮದಲ್ಲಿ ಈ ಪೋಸ್ಟ್ ಚೇತನ್‌ವರ ಬಂಧನಕ್ಕೆ ಕಾರಣವಾಗುತ್ತದೆ? ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುವವರ ಕತೆ ಇದು” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂಬ ಟ್ವೀಟ್ ಸಂಬಂಧಿಸಿ ಚೇತನ್ ಅಹಿಂಸಾ ಬಂಧನವಾಗಿದೆ. ಸಾಕಷ್ಟು ವಿಚಾರಗಳಲ್ಲಿ ಅವರ ಹೇಳಿಕೆಗಳ ಬಗ್ಗೆ ನನಗೆ ಭಿನ್ನಾಭಿಪ್ರಾಯವಿದೆ. ಆದರೆ ಈ ರೀತಿಯ ವಾಕ್ ಸ್ವಾತಂತ್ರ್ಯ ಕಸಿಯುವ ಬಂಧನಗಳನ್ನು ಖಂಡಿಸುತ್ತೇನೆ. ಚೇತನ್ ಹಿಂದುತ್ವದ ವಿಚಾರದಲ್ಲಿ ಮಾಡಿರುವ ಈ ಟ್ವೀಟ್ ಸಂಪೂರ್ಣ ಸತ್ಯದಿಂದ ಕೂಡಿದೆ. ಇದಕ್ಕೆ ನನ್ನ ಬೆಂಬಲವಿದೆ” ಎಂದು ಸಾಮಾಜಿಕ ಕಾರ್ಯಕರ್ತರಾದ ಭಾಗ್ಯ ನಾರಾಯಣರವರು ಬರೆದಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರರು ಆದ Chetan Ahimsa ಅವರನ್ನು ಬಂದಿಸಲಾಗಿದೆ. ಸುಳ್ಳಿನ ಮೇಲೆ ಕಟ್ಟಿದಂತ ಹಿಂದುತ್ವದ ವಿರುದ್ದ ಪೋಸ್ಟ್ ಹಾಕಿರುವುದಕ್ಕೆ ಚೇತನ್ ರವರು ಬಂದನವಾಗಿದ್ದಾರೆ. ಅವರ ಮಾತುಗಳು ಮತ್ತು ಹೇಳಿಕೆಗಳು ಯಾವುದೇ ಜಾತಿ ಧರ್ಮ ಹಾಗೂ ಒಂದು ಗುಂಪಿನ ವಿರೋಧವಾಗಿರುವುದಿಲ್ಲ. ಸತ್ಯತೆ ಮತ್ತು ಹೇಳಿಕೆಯ ಸಾಕ್ಷಿ ಆಧಾರದ ಮೇಲೆ ಕೂಡಿರುತ್ತದೆ. ಈ ರೀತಿ ನಡೆ ಪ್ರಜಾಪ್ರಭುತ್ವದ ಅಭಿವ್ಯಕ್ತಿ ಸ್ವಾತಂತ್ರದ ಹತ್ತಿಕ್ಕುವ ಕೆಲಸವಾಗುತ್ತದೆ. ಅವರ ಚಿಂತನೆಗಳು ಹೋರಾಟಗಳನ್ನು ಈ ಮೂಲಕ ಎಂದಿಗೂ ಕೊನೆಗಣಿಸಲು ಸಾಧ್ಯವಿಲ್ಲ. ಅವುಗಳ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಉನೈಸ್ ಉನ್ನಾಸ್ ಎಂಬುವವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಿಂದುತ್ವದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಕನ್ನಡದ ನಟ ಚೇತನ್ ಅಹಿಂಸಾರವರನ್ನು ಶೇಷಾದ್ರಿಪುರಂ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ

ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು

1992 ರಲ್ಲಿ : ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು

ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ -> ಇದು ಕೂಡ ಒಂದು ಸುಳ್ಳು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ ಎಂದು ಚೇತನ್ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು
2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು

ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ. 2022ರ ಫೆಬ್ರವರಿಯಲ್ಲಿಯೂ ಸಹ ಹೈಕೋರ್ಟ್ ನ್ಯಾಯಾಧೀಶರ ತೀರ್ಪಿನ ಕುರಿತು ವರ್ಷಗಳ ಹಿಂದೆ ಚೇತನ್ ಟ್ವೀಟ್ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಚೇತನ್‌ರವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...