Homeಕರ್ನಾಟಕತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

- Advertisement -
- Advertisement -

ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್‌ ಉದ್ದದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಈ ವೇಳೆ ಅವರು ರೋಡ್‌ ಶೋ ನಡೆಸುವ ಮಾರ್ಗದಲ್ಲಿ ಮಹಾದ್ವಾರಕ್ಕೆ ನಕಲಿ ಇತಿಹಾಸದ ಉರಿಗೌಡ, ನಂಜೇಗೌಡ ಹೆಸರಿಡಲಾಗಿತ್ತು. ಜನರ ತೀವ್ರ ವಿರೋಧದಿಂದ ಇದೀಗ ಆ ಮಹಾದ್ವಾರದ ಹೆಸರನ್ನು ತಗೆದು ಬಾಲಗಂಗಾಧರ ನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರಿಡಲಾಗಿದೆ.

ಭಾನುವಾರ ಮಂಡ್ಯ ನಗರ ವ್ಯಾಪ್ತಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಈ ಮಾರ್ಗದಲ್ಲಿ ಒಟ್ಟು 4 ಮಹಾದ್ವಾರ ಅಳವಡಿಸಲಾಗಿದೆ. ರೋಡ್‌ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್‌. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು.

ಟಿಪ್ಪು ಹತ್ಯೆ ಮಾಡಿದ್ದು ಉರಿಗೌಡ, ನಂಜೇಗೌಡ ಎಂದು ವಾಟ್ಸ್‌ಅಪ್‌ನಲ್ಲಿ ಬಂದ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯದ ಹೆದ್ದಾರಿಯಲ್ಲಿ ಹಾಕಲಾಗಿರುವ ‘ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ’ವನ್ನು ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ಕೈಯಲ್ಲಿ ಖಡ್ಗ ಹಿಡಿದು ನಿಂತಿರುವ ತಮಿಳುನಾಡಿನ ವೀರರ ಚಿತ್ರವನ್ನೇ ಉರಿಗೌಡ, ನಂಜೇಗೌಡ ಎಂದು ಹರಿಬಿಟ್ಟಿರುವುದು ಈಗಾಗಲೇ ಬಯಲಾಗಿದೆ. ಆ ಚಿತ್ರಗಳನ್ನೇ ಇಲ್ಲಿನ ಮಹಾದ್ವಾರದಲ್ಲೂ ಹಾಕಿಕೊಳ್ಳಲಾಗಿತ್ತು.

ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಪ್ರಸಿದ್ಧರಾಗಿದ್ದರು ಎಂದು ಲಭ್ಯವಿರುವ ಮಾಹಿತಿಗಳು ಹೇಳುತ್ತವೆ. ಈ ಇಬ್ಬರು ಸಹೋದರರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಚಿತ್ರವನ್ನೇ ‘ಉರಿಗೌಡ, ನಂಜಗೌಡ’ ಎಂಬ ಕಾಲ್ಪನಿಕ ಕತೆಗೆ ಬಳಸಿಕೊಳ್ಳಲಾಗಿದೆ.

ಈ ಉರಿಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಕೊಂದರು ಎಂದು ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ಸುಳ್ಳು ಪ್ರಚಾರ ಮಾಡುತ್ತಾ ಬಂದಿದ್ದಾರೆ.

ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಮಹಾದ್ವಾರವು ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಮಹಾದ್ವಾರದ ಚಿತ್ರ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಮಂಡ್ಯ ಜಿಲ್ಲಾಡಳಿತ ಮಹಾದ್ವಾರದ ಹೆಸರು ಬದಲಾವಣೆ ಮಾಡಿದೆ.

ಈ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ತೆರವು ಮಾಡದಿದ್ದರೆ ಅಥವಾ ಹೆಸರು ಬದಲಾಯಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಗತಿಪರರು ಎಚ್ಚರಿಕೆ ನೀಡಿದ್ದರು. ಜತೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಕೂಡಾ ವಿರೋಧ ವ್ಯಕ್ತಪಡಿಸಿದ್ದರು.

ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರಕ್ಕೆ ಪ್ರಗತಿಪರರಿಂದ ವಿರೋಧ:

ಈ ಬಗ್ಗೆ ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಪ್ರತಿಕ್ರಿಯಿಸಿ, ”ಹಾಕಿರುವ ಫ್ಲೆಕ್ಸ್‌ಗಳನ್ನು ಕೂಡಲೇ ತೆರೆವುಗೊಳಿಸಿ ಜಿಲ್ಲೆಯನ್ನು ಕೋಮು ದಳ್ಳುರಿಗೆ ತಳ್ಳುವ ಬಿಜೆಪಿಯ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಡಳಿತವನ್ನು CPIM ಮಂಡ್ಯ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ” ಎಂದು ಹೇಳಿದ್ದರು.

”ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸಲಾಗುತ್ತಿದೆ. ಆ ಮೂಲಕ ಒಕ್ಕಲಿಗರನ್ನು ಬ್ರಿಟೀಷರ ಏಜೆಂಟರು ಎಂದು ಅವಮಾನಿಸುವ ಕೆಲಸವನ್ನು ಬಿಜೆಪಿ ಮತ್ತು ಸಂಘ ಪರಿವಾರ ಮಾಡುತ್ತಿದೆ. ಇದರ ಮುಂದವರಿಕೆಯಾಗಿ ಪ್ರಧಾನಿಯೊಬ್ಬರ ಬೇಟಿಯ ಘನತೆಯನ್ನೂ ಮಣ್ಣು ಪಾಲು ಮಾಡಿ ತನ್ನ ಸುಳ್ಳಿನ, ವಿಕೃತಿಯ ಪ್ರಚಾರದಲ್ಲಿ ಬಿಜೆಪಿ ನಿರತವಾಗಿದೆ” ಎಂದು ಟೀಕಿಸಿದ್ದರು.

ಲೇಖಕ ಚಂದ್ರಪ್ರಭ ಕಟಾರಿ ಪ್ರತಿಕ್ರಿಯಿಸಿ, ”ವಾಟ್ಸಪ್ ಯೂನಿವರ್ಸಿಟಿ ಹುಟ್ಟಿ(ಸಿ)ದ ಉರಿಗೌಡ ಮತ್ತು ನಂಜೇಗೌಡರು ಬ್ರಿಟಿಷರ ಪರವಾಗಿ ಯುದ್ಧ ಮಾಡಿದರು ಎಂಬ ಕಟ್ಟುಕತೆ ಈಗ ಅಕ್ಷರಶಃ ಬೀದಿಯಲ್ಲಿ ರಾರಾಜಿಸುತ್ತಿದೆ. ಸಂಘಿಗಳು ವ್ಯವಸ್ಥಿತವಾಗಿ ತಮ್ಮ ರಾಜಕೀಯ ಲಾಭಕ್ಕಾಗಿ ಇಂಥ ದೇಶದ್ರೋಹದ ಅಪವಾದವನ್ನು ಒಕ್ಕಲಿಗ ಸಮುದಾಯದ ಹಣೆಗೆ ಕಟ್ಟಲು ಪಣ ತೊಟ್ಟಂತಿದೆ. ಅಪಾರ ಕನ್ನಡಾಭಿಮಾನದ ಒಕ್ಕಲಿಗರು ಇದನ್ನು ಪ್ರತಿಭಟಿಸಿ, ಈ ಕಟ್ಟುಕತೆ ಮುಂದುವರೆಯದಂತೆ ನೋಡಿಕೊಳ್ಳುವ ಅನಿವಾರ್ಯತೆ ಈಗ ಅವರ ಹೆಗಲಿಗೇರಿದೆ. ಪಕ್ಷಾತೀತವಾಗಿ ಇದನ್ನು ಈಗಲೇ ಚಿವುಟಿ ಹಾಕದಿದ್ದರೆ, ಒಕ್ಕಲಿಗ ಸಮುದಾಯವು ಬ್ರಿಟಿಷರ ಪರವಾಗಿತ್ತು ಎಂಬ ಕಪೋಲಕಲ್ಪಿತ ಕತೆಯು ಮುಂದಿನ ಪೀಳಿಗೆಯ ಜನಮಾನಸದಲ್ಲಿ ಶಾಶ್ವತವಾಗಿ ಉಳಿದು, ದೇಶದ್ರೋಹದ ಪಟ್ಟದ ಅಪಾಯವಂತೂ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಸಿದ್ದರು.

ಹೋರಾಟಗಾರರು ಹಾಗೂ ವೈದ್ಯರೂ ಆದ ಎಚ್.ವಿ.ವಾಸು ಅವರು ಪ್ರತಿಕ್ರಿಯಿಸಿ, ”ಇದು ಮಂಡ್ಯ ಜಿಲ್ಲೆಗೆ ಮಾಡುತ್ತಿರುವ ಅವಮಾನವೆಂಬುದರಲ್ಲಿ ಸಂದೇಹವಿಲ್ಲ. ಮಂಡ್ಯದ ಕುರಿತು ಹೊರಗೆ ಹಲವು ಪೂರ್ವಗ್ರಹಗಳಿವೆ. ಅವರು ತೀರಾ ‘Mandya centred’, ಜಾತಿ ಕೇಂದ್ರಿತ ಮನೋಭಾವ ಇರುವವರು, ಮಂಡ್ಯ ಕುರಿತಂತೆ ದುರಭಿಮಾನ ಹೊಂದಿರುವವರು ಇತ್ಯಾದಿ. ಮಂಡ್ಯದ ಜೊತೆ ಕಳೆದ 23 ವರ್ಷಗಳ ಒಡನಾಟ, 12 ವರ್ಷಗಳ ಕಾಲ ಅಲ್ಲಿಯೇ ವಾಸ ಮಾಡಿದ್ದುದರ ಆಧಾರದ ಮೇಲೆ ಹೇಳುವುದಾದರೆ ಅವೆಲ್ಲವೂ ಸುಳ್ಳು… ಒಂದು ಸಹಜ ವಿಶಾಲ ಮನೋಭಾವ, ನೆಲಮೂಲದ ವಿವೇಕವನ್ನು ಹೊಂದಿರುವ ಸಮುದಾಯ ಅಲ್ಲಿದೆ (ಎಲ್ಲಾ ಕಡೆ ಇರುವ ಸಮಸ್ಯೆಗಳು, ಕೆಡುಕು ಅಲ್ಲೂ ಇದೆ; ಇರುತ್ತದೆ)” ಎಂದು ವಿವರಿಸಿದರು.

”ಯಾವ ಸಂದೇಹವೂ ಇಲ್ಲದೇ ಹೇಳಬಹುದಾದ ಸಂಗತಿಯೆಂದರೆ – ಇಂದು ಮಂಡ್ಯದಲ್ಲಿ ದ್ವಾರದಲ್ಲಿ ಹೆಸರಿಸಲಾಗಿರುವ ಎರಡು ಫೇಕ್ ಪಾತ್ರಗಳು ಒಕ್ಕಲಿಗ ಸಮುದಾಯಕ್ಕೂ, ಮಂಡ್ಯಕ್ಕೂ ದೊಡ್ಡ ಅವಮಾನವಲ್ಲದೇ ಬೇರೇನೂ ಅಲ್ಲ. ಇಂದಿಗೂ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಡಾ.ಸಿ.ಬಂದೀಗೌಡರು, ನಮ್ಮೆಲ್ಲರನ್ನು ಪೊರೆದ ಹಿರಿಯ ಜೀವ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಸಂಸದ ಹಿರಿಯ ನಾಯಕ ನಾರಾಯಣ್ ಇಂಥವರನ್ನು ನೆನೆದರೇನೇ ಮನಸ್ಸಿನಲ್ಲಿ ಗೌರವ, ಪ್ರೀತಿ ಉಕ್ಕುತ್ತದೆ. ಹಾಗೆಯೇ ನಾವು ದಾರಿ ತಪ್ಪಬಾರದು ಎಂಬ ಎಚ್ಚರ ಮೂಡುತ್ತದೆ. ಅವರಂಥವರ ಸಹವಾಸದಲ್ಲಿ ಒಂದೆರಡು ದಶಕಗಳ ಕಾಲ ಇದ್ದ ನಾವುಗಳು ಮಂಡ್ಯಕ್ಕೆ ಈ ಅವಮಾನ ಆಗದಂತೆ ನೋಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ” ಎಂದು ನೆನಪಿಸಿದರು.

ಕವಿ ರಾಜೇಂದ್ರ ಪ್ರಸಾದ್ ಈ ಕುರಿತು ಪೋಸ್ಟ್ ಮಾಡಿ, ”ಪ್ರಧಾನಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ಪಕ್ಷವು ಕಪೋಲಕಲ್ಪಿತವಾದ ‘ಉರಿಗೌಡ & ನಂಜೇಗೌಡ’ ಹೆಸರುಗಳಲ್ಲಿ ಹಾಕಿರುವ ಫ್ಲೆಕ್ಸ್ ಗಳನ್ನು ಕೂಡಲೇ ತೆರೆವು ಗೊಳಿಸಿ ಎಲ್ಲವೂ ಶಾಂತಿಯುತವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...