Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...