Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...