Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...