Homeಕರ್ನಾಟಕ"ಊರು ಸುಟ್ಟರೂ ಹನುಮಪ್ಪ ಹೊರಗ"; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

“ಊರು ಸುಟ್ಟರೂ ಹನುಮಪ್ಪ ಹೊರಗ”; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ನಾಟಕ ವೀಕ್ಷಿಸಬಹುದು.

- Advertisement -
- Advertisement -

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ವಿಕಸಂ ಎಂಬ ತಂಡವು ‘ಊರು ಸುಟ್ಟರೂ ಹನುಮಪ್ಪ ಹೊರಗ’ ಎಂಬ ನಾಟಕದ ಆನ್‌ಲೈನ್ ಪ್ರದರ್ಶನವನ್ನು ಇಂದು ಮತ್ತು ನಾಳೆ ಪ್ರದರ್ಶಿಸುತ್ತದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ  ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದೆ ದಾರಿಯಲ್ಲಿ ಇನ್ನೊಂದು ತಂಡ ಸಿದ್ಧವಾಗಿದ್ದು, ಪ್ರೇಕ್ಷಕರಿರುವಲ್ಲೇ ನಾಟಕ ತೋರಿಸುವ ಪಣ ತೊಟ್ಟಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹೀಗಾಗಿ  ಆನ್‌ಲೈನ್ ಮುಖೇನ ನಾಟಕ ಪ್ರಸ್ತುತ ಪಡಿಸುವ ಕೆಲಸ ವಿಕಸಂ ಎನ್ನುವ ತಂಡವೊಂದು ಮಾಡುತ್ತಿದೆ. ಭಾಸ್ಕರ್ ನೀನಾಸಂ ನಿರ್ದೇಶನದ, ಹನುಮಂತ ಹಾಲಿಗೇರಿಯವರ “ಊರು ಸುಟ್ಟರೂ ಹನುಮಪ್ಪ ಹೊರಗ” ನಾಟಕವನ್ನು ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ವೀಕ್ಷಿಸಬಹುದು.

ಊರು ಸುಟ್ಟರೂ ಹನುಮಪ್ಪ ಹೊರಗ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ನಾಟಕ ವೀಕ್ಷಿಸಬಹುದು.

ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...