Homeಕರ್ನಾಟಕ"ಊರು ಸುಟ್ಟರೂ ಹನುಮಪ್ಪ ಹೊರಗ"; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

“ಊರು ಸುಟ್ಟರೂ ಹನುಮಪ್ಪ ಹೊರಗ”; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ನಾಟಕ ವೀಕ್ಷಿಸಬಹುದು.

- Advertisement -
- Advertisement -

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ವಿಕಸಂ ಎಂಬ ತಂಡವು ‘ಊರು ಸುಟ್ಟರೂ ಹನುಮಪ್ಪ ಹೊರಗ’ ಎಂಬ ನಾಟಕದ ಆನ್‌ಲೈನ್ ಪ್ರದರ್ಶನವನ್ನು ಇಂದು ಮತ್ತು ನಾಳೆ ಪ್ರದರ್ಶಿಸುತ್ತದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ  ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದೆ ದಾರಿಯಲ್ಲಿ ಇನ್ನೊಂದು ತಂಡ ಸಿದ್ಧವಾಗಿದ್ದು, ಪ್ರೇಕ್ಷಕರಿರುವಲ್ಲೇ ನಾಟಕ ತೋರಿಸುವ ಪಣ ತೊಟ್ಟಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹೀಗಾಗಿ  ಆನ್‌ಲೈನ್ ಮುಖೇನ ನಾಟಕ ಪ್ರಸ್ತುತ ಪಡಿಸುವ ಕೆಲಸ ವಿಕಸಂ ಎನ್ನುವ ತಂಡವೊಂದು ಮಾಡುತ್ತಿದೆ. ಭಾಸ್ಕರ್ ನೀನಾಸಂ ನಿರ್ದೇಶನದ, ಹನುಮಂತ ಹಾಲಿಗೇರಿಯವರ “ಊರು ಸುಟ್ಟರೂ ಹನುಮಪ್ಪ ಹೊರಗ” ನಾಟಕವನ್ನು ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ವೀಕ್ಷಿಸಬಹುದು.

ಊರು ಸುಟ್ಟರೂ ಹನುಮಪ್ಪ ಹೊರಗ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ನಾಟಕ ವೀಕ್ಷಿಸಬಹುದು.

ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...