Homeಕರ್ನಾಟಕ"ಊರು ಸುಟ್ಟರೂ ಹನುಮಪ್ಪ ಹೊರಗ"; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

“ಊರು ಸುಟ್ಟರೂ ಹನುಮಪ್ಪ ಹೊರಗ”; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ನಾಟಕ ವೀಕ್ಷಿಸಬಹುದು.

- Advertisement -
- Advertisement -

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ವಿಕಸಂ ಎಂಬ ತಂಡವು ‘ಊರು ಸುಟ್ಟರೂ ಹನುಮಪ್ಪ ಹೊರಗ’ ಎಂಬ ನಾಟಕದ ಆನ್‌ಲೈನ್ ಪ್ರದರ್ಶನವನ್ನು ಇಂದು ಮತ್ತು ನಾಳೆ ಪ್ರದರ್ಶಿಸುತ್ತದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ  ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದೆ ದಾರಿಯಲ್ಲಿ ಇನ್ನೊಂದು ತಂಡ ಸಿದ್ಧವಾಗಿದ್ದು, ಪ್ರೇಕ್ಷಕರಿರುವಲ್ಲೇ ನಾಟಕ ತೋರಿಸುವ ಪಣ ತೊಟ್ಟಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹೀಗಾಗಿ  ಆನ್‌ಲೈನ್ ಮುಖೇನ ನಾಟಕ ಪ್ರಸ್ತುತ ಪಡಿಸುವ ಕೆಲಸ ವಿಕಸಂ ಎನ್ನುವ ತಂಡವೊಂದು ಮಾಡುತ್ತಿದೆ. ಭಾಸ್ಕರ್ ನೀನಾಸಂ ನಿರ್ದೇಶನದ, ಹನುಮಂತ ಹಾಲಿಗೇರಿಯವರ “ಊರು ಸುಟ್ಟರೂ ಹನುಮಪ್ಪ ಹೊರಗ” ನಾಟಕವನ್ನು ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ವೀಕ್ಷಿಸಬಹುದು.

ಊರು ಸುಟ್ಟರೂ ಹನುಮಪ್ಪ ಹೊರಗ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ನಾಟಕ ವೀಕ್ಷಿಸಬಹುದು.

ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...