Homeಅಂತರಾಷ್ಟ್ರೀಯಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ;...

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

- Advertisement -
- Advertisement -

ಭಾರತ ರಫ್ತು ಮಾಡುವ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರ (ಆ.27) ಜಾರಿಯಾಗಲಿದೆ. ಇದರಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ತೀವ್ರವಾದ ಹೊಡೆತ ಬೀಳುವ ಸಾಧ್ಯತೆಯಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಘೋಷಿಸಿದ್ದರು. ಆದರೆ, ಈ ತಿಂಗಳ ಆರಂಭದಲ್ಲಿ ಅವರು ಭಾರತವು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರಿಂದಾಗಿ ಅಮೆರಿಕವು ತನ್ನ ಮಿತ್ರ ರಾಷ್ಟ್ರದ ಮೇಲೆ ವಿಧಿಸಿದ ಒಟ್ಟು ಸುಂಕ ಶೇ.50ಕ್ಕೆ ತಲುಪಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತ-ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳು ವಿಸ್ತರಿಸಿವೆ. ಆದರೆ, ಮಾರುಕಟ್ಟೆ ಪ್ರವೇಶ ಮತ್ತು ದೇಶೀಯ ರಾಜಕೀಯ ಒತ್ತಡಗಳ ಮೇಲಿನ ವಿವಾದಗಳಿಗೆ ಅದು ಗುರಿಯಾಗುತ್ತಿವೆ. ಭಾರತವು ಪ್ರಮುಖ ಜಾಗತಿಕ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದಾಗಿದೆ. ಹೆಚ್ಚುವರಿ ಸುಂಕ ಇದನ್ನು ನಿಧಾನಗೊಳಿಸಬಹುದು.

ಅಮೆರಿಕದ ಸುಂಕ ಪರಿಣಾಮ ಬೀರುವ ವಲಯಗಳು

ನವದೆಹಲಿ ಮೂಲದ ಚಿಂತಕರ ಚಾವಡಿ ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಶಿಯೇಟಿವ್‌ನ ಅಂದಾಜಿನ ಪ್ರಕಾರ, ಜವಳಿ, ರತ್ನಗಳು ಮತ್ತು ಆಭರಣಗಳು, ಚರ್ಮದ ಸರಕುಗಳು, ಆಹಾರ ಮತ್ತು ವಾಹನಗಳಂತಹ ಕಾರ್ಮಿಕ-ತೀವ್ರ ವಲಯಗಳ ಮೇಲೆ ಅಮೆರಿಕದ ಸುಂಕ ಹೇರಿಕೆ ಹೆಚ್ಚು ಪರಿಣಾಮ ಬೀರಲಿದೆ.

“ಹೊಸ ಸುಂಕ ಪದ್ಧತಿಯು ಒಂದು ಕಾರ್ಯತಂತ್ರದ ಆಘಾತವಾಗಿದ್ದು, ಅಮೆರಿಕದಲ್ಲಿ ದೀರ್ಘಕಾಲದಿಂದ ಸ್ಥಾಪಿತವಾಗಿರುವ ಭಾರತದ ಉಪಸ್ಥಿತಿಯನ್ನು ಅಳಿಸಿಹಾಕುವ ಬೆದರಿಕೆ ಒಡ್ಡಿದೆ. ರಫ್ತು ಆಧಾರಿತ ಕೇಂದ್ರಗಳಲ್ಲಿ ನಿರುದ್ಯೋಗವನ್ನು ಉಂಟುಮಾಡಲಿದೆ ಮತ್ತು ಕೈಗಾರಿಕಾ ಮೌಲ್ಯ ಸರಪಳಿಯಲ್ಲಿ ಭಾರತದ ಪಾತ್ರವನ್ನು ದುರ್ಬಲಗೊಳಿಸುತ್ತದೆ” ಎಂದು ಚಿಂತಕರ ಚಾವಡಿಯ ಸಂಸ್ಥಾಪಕ ಮತ್ತು ಮಾಜಿ ಭಾರತೀಯ ವ್ಯಾಪಾರ ಅಧಿಕಾರಿ ಅಜಯ್ ಶ್ರೀವಾಸ್ತವ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಅಮೆರಿಕವು ಔಷಧಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳಂತಹ ಕೆಲವು ವಲಯಗಳಿಗೆ ಹೆಚ್ಚುವರಿ ಸುಂಕದಿಂದ ವಿನಾಯಿತಿ ನೀಡಿದೆ. ಈ ವಲಯಗಳಲ್ಲಿ ಭಾರತಕ್ಕೆ ಅದರ ಮಾನ್ಯತೆ ಗಮನಾರ್ಹವಾಗಿರುವುದರಿಂದ ಸ್ವಲ್ಪ ಪರಿಹಾರ ಸಿಕ್ಕಿದೆ ಎಂದು ವರದಿ ತಿಳಿಸಿದೆ.

ನಷ್ಟದ ಭೀತಿಯಲ್ಲಿ ರಫ್ತುದಾರರು

“ದೇಶೀಯ ಬೇಡಿಕೆ ಬಲಗೊಂಡು ಇತರ ವಿದೇಶಿ ಮಾರುಕಟ್ಟೆಗಳು ಹೆಚ್ಚಿನ ಭಾರತೀಯ ವಸ್ತುಗಳನ್ನು ಖರೀದಿಸದಿದ್ದೆ ನಮ್ಮ ಉದ್ಯಮವು ಸದ್ಯದಲ್ಲಿಯೇ ಗಣನೀಯ ಹೊಡೆತವನ್ನು ಅನುಭವಿಸಲಿದೆ ಎಂದು ಉತ್ತರ ಭಾರತದ ಆಗ್ರಾ ನಗರದ ಚರ್ಮದ ಪಾದರಕ್ಷೆ ರಫ್ತುದಾರ ಪೂರಣ್ ದಾವರ್ ಹೇಳುತ್ತಾರೆ.

“ಇದು ಸಂಪೂರ್ಣ ಆಘಾತ” ಎಂಬುವುದಾಗಿ ಇತ್ತೀಚಿನ ವರ್ಷಗಳಲ್ಲಿ ಅಮೆರಿಕದೊಂದಿಗೆ ವ್ಯವಹಾರ ವೃದ್ದಿಸಿಕೊಂಡಿರುವ ದಾವರ್ ಹೇಳಿದ್ದಾರೆ. ದಾವರ್ ಅವರ ಗ್ರಾಹಕರಲ್ಲಿ ಪ್ರಮುಖ ಫ್ಯಾಷನ್ ಚಿಲ್ಲರೆ ವ್ಯಾಪಾರ ಸಂಸ್ಥೆ ‘ಝಾರಾ’ ಕೂಡ ಒಂದು.

ರಫ್ತು ಉತ್ತೇಜನಾ ಸಂಸ್ಥೆಯಾದ ಚರ್ಮ ರಫ್ತು ಮಂಡಳಿಯ ಪ್ರಾದೇಶಿಕ ಅಧ್ಯಕ್ಷರೂ ಆಗಿರುವ ದಾವರ್, ಹೆಚ್ಚಿನ ಸುಂಕಗಳು ತನ್ನದೇ ಆದ ಗ್ರಾಹಕರಿಗೆ ಹಾನಿ ಮಾಡುತ್ತದೆ ಎಂಬುದನ್ನು ಅಮೆರಿಕ ಅರ್ಥಮಾಡಿಕೊಳ್ಳಬೇಕು ಎಂಬುವುದಾಗಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ರಫ್ತುದಾರರನ್ನು ಪ್ರತಿನಿಧಿಸುವ ಗುಂಪುಗಳು ಹೊಸ ಆಮದು ಸುಂಕಗಳು ಅಮೆರಿಕದ ಮಾರುಕಟ್ಟೆಯ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹಾನಿ ಮಾಡಬಹುದು ಎಂದು ಎಚ್ಚರಿಸಿದ್ದಾರೆ.

“ಇದು ಒಂದು ಕ್ಲಿಷ್ಟಕರ ಪರಿಸ್ಥಿತಿ. ಕೆಲವು ಉತ್ಪನ್ನ ಮಾರ್ಗಗಳು ರಾತ್ರೋರಾತ್ರಿ ಕಾರ್ಯಸಾಧ್ಯವಾಗುವುದಿಲ್ಲ” ಎಂದು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟದ ಮಹಾನಿರ್ದೇಶಕ ಅಜಯ್ ಸಹಾಯ್ ಹೇಳಿದ್ದಾರೆ.

ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದ ಮೋದಿ

ಭಾರತದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಹೆಚ್ಚಿನ ಪ್ರವೇಶಕ್ಕಾಗಿ ಅಮೆರಿಕ ಆಡಳಿತವು ಒತ್ತಾಯಿಸುತ್ತಿರುವುದರಿಂದ ಹೆಚ್ಚಿನ ಸುಂಕಗಳು ಹೇರಿವೆ.

ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕಾಗಿ ಐದು ಸುತ್ತಿನ ಮಾತುಕತೆಗಳನ್ನು ನಡೆಸಿವೆ, ಆದರೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ.

ಇದಕ್ಕೆ ಮುಖ್ಯ ಕಾರಣ, ಈ ವಲಯಗಳನ್ನು ಅಗ್ಗದ ಅಮೆರಿಕನ್ ಆಮದುಗಳಿಗೆ ತೆರೆಯುವುದನ್ನು ಭಾರತ ವಿರೋಧಿಸಿದ್ದು, ಜೀವನೋಪಾಯಕ್ಕಾಗಿ ಇವುಗಳನ್ನು ಅವಲಂಬಿಸಿರುವ ಲಕ್ಷಾಂತರ ಭಾರತೀಯರ ಉದ್ಯೋಗಗಳಿಗೆ ಅಪಾಯವಿದೆ ಎಂಬ ಕಳವಳವನ್ನು ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ನನಗೆ ರೈತರು, ಸಣ್ಣ ವ್ಯವಹಾರಗಳು ಮತ್ತು ಹೈನುಗಾರಿಕೆಯ ಹಿತಾಸಕ್ತಿಗಳು ಅತ್ಯಂತ ಮುಖ್ಯ. ನನ್ನ ಸರ್ಕಾರವು ಅವರಿಗೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳುತ್ತದೆ” ಎಂದು ಮೋದಿ ಈ ವಾರ ತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೇಳಿದ್ದಾರೆ. “ಜಗತ್ತು ‘ಆರ್ಥಿಕ ಸ್ವಾರ್ಥದ ರಾಜಕೀಯ’ಕ್ಕೆ ಸಾಕ್ಷಿಯಾಗುತ್ತಿದೆ” ಎಂದಿದ್ದಾರೆ.

ಈ ವಾರ ಆರನೇ ಸುತ್ತಿನ ವ್ಯಾಪಾರ ಮಾತುಕತೆಗಾಗಿ ನವದೆಹಲಿಗೆ ಭೇಟಿ ನೀಡುವ ಯೋಜನೆಯನ್ನು ಅಮೆರಿಕದ ನಿಯೋಗ ರದ್ದುಗೊಳಿಸಿದೆ.

ಸುಂಕಗಳಿಂದಾಗುವ ಹೊಡೆತವನ್ನು ತಗ್ಗಿಸಲು ಭಾರತ ಸ್ಥಳೀಯ ಸುಧಾರಣೆಗಳನ್ನು ಯೋಜಿಸುತ್ತಿದೆ.

ಸ್ಥಳೀಯ ಬಳಕೆಯನ್ನು ಹೆಚ್ಚಿಸಲು ಮತ್ತು ಆರ್ಥಿಕತೆಯನ್ನು ನಿರೋಧಿಸಲು ಸರ್ಕಾರ ಸುಧಾರಣೆಗಳ ಮೇಲೆ ಕೆಲಸ ಮಾಡಲು ಪ್ರಾರಂಭಿಸಿದೆ.

ಅಕ್ಟೋಬರ್‌ನಲ್ಲಿ ಬರುವ ಪ್ರಮುಖ ಹಿಂದೂ ಹಬ್ಬ ದೀಪಾವಳಿಗೂ ಮುನ್ನ ವಿಮೆ, ಕಾರುಗಳು ಮತ್ತು ಉಪಕರಣಗಳ ವೆಚ್ಚವನ್ನು ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ ಅಥವಾ ಬಳಕೆ ತೆರಿಗೆಯನ್ನು ಬದಲಾಯಿಸಲು ಅದು ಮುಂದಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ತೆರಿಗೆ ಕಡಿತಗೊಳಿಸುವ ಬಗ್ಗೆ ನಿರ್ಧರಿಸಲು ಸರ್ಕಾರಿ ಮಂಡಳಿ ಮುಂದಿನ ತಿಂಗಳ ಆರಂಭದಲ್ಲಿ ಸಭೆ ಸೇರಲಿದೆ. ರಫ್ತುದಾರರಿಗೆ ಅನುಕೂಲಕರ ಬ್ಯಾಂಕ್ ಸಾಲ ದರಗಳನ್ನು ಒಳಗೊಂಡಿರುವ ಆರ್ಥಿಕ ಪ್ರೋತ್ಸಾಹಕಗಳ ಕುರಿತು ವ್ಯಾಪಾರ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಚರ್ಚಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವ್ಯಾಪಾರ ಸಚಿವಾಲಯವು ಇತರ ಪ್ರದೇಶಗಳಿಗೆ, ವಿಶೇಷವಾಗಿ ಲ್ಯಾಟಿನ್ ಅಮೆರಿಕ, ಆಫ್ರಿಕಾ ಮತ್ತು ಆಗ್ನೇಯ ಏಷ್ಯಾಕ್ಕೆ ರಫ್ತುಗಳನ್ನು ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾರತವು ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಶ್ರಮಿಸುತ್ತಿರುವುದರಿಂದ ಯುರೋಪಿಯನ್ ಒಕ್ಕೂಟದೊಂದಿಗೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳು ಹೊಸ ಆಯಾಮವನ್ನು ಪಡೆಯಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

Courtesy : newindianexpress.com

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...