Homeಅಂತರಾಷ್ಟ್ರೀಯಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

- Advertisement -
- Advertisement -

ವಸಾಹತುಗಾರ ಇಸ್ರೇಲ್‌ನ ವಶದಲ್ಲಿರುವ ಪ್ಯಾಲೆಸ್ತೀನ್‌ನ ಗಾಝಾದಲ್ಲಿ “ತಕ್ಷಣದ, ಬೇಷರತ್ತಾದ ಮತ್ತು ಶಾಶ್ವತ ಕದನ ವಿರಾಮ”ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಅಮೆರಿಕ ಮತ್ತೆ ವಿರೋಧಿಸಿದೆ. ನಿರ್ಣಯದ ವಿರುದ್ಧ ತನ್ನ ವಿಶೇಷ ಅಧಿಕಾರ ವೀಟೊ ಬಳಸಿ ಅದನ್ನು ವಿರೋಧಿಸಿದ್ದು, ಅದಾಗ್ಯೂ, ಕೌನ್ಸಿಲ್‌ನಲ್ಲಿ ಉಳಿದ 14 ದೇಶಗಳು ‘ಕದನ ವಿರಾಮ’ದ ಪರವಾಗಿ ಮತ ಚಲಾಯಿಸಿದವು. ಬೇಷರತ್‌ ಗಾಝಾ ಕದನ ವಿರಾಮ

ಗಾಝಾದಲ್ಲಿನ ಪರಿಸ್ಥಿತಿಯನ್ನು “ದುರಂತ” ಎಂದು ಕರೆದಿರುವ ಭದ್ರತಾ ಮಂಡಳಿಯ ನಿರ್ಣಯವು, “ಗಾಝಾಗೆ ಮಾನವೀಯ ನೆರವು ಪ್ರವೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣ ಮತ್ತು ಬೇಷರತ್ತಾಗಿ ತೆಗೆದುಹಾಕಬೇಕು. ಜೊತೆಗೆ ವಿಶ್ವಸಂಸ್ಥೆ ಮತ್ತು ಮಾನವೀಯ ಸಂಘಟನೆಗಳು ಅದರ ಸುರಕ್ಷಿತ ಮತ್ತು ಅಡೆತಡೆಯಿಲ್ಲದ ವಿತರಣೆ ಮಾಡಲು ಅವಕಾಶ ನೀಡಬೇಕು” ಎಂದು ಒತ್ತಾಯಿಸಿದೆ.

ಇಸ್ರೇಲ್ ಅನ್ನು ರಕ್ಷಿಸುವ ಸಲುವಾಗಿ ಭದ್ರತಾ ಮಂಡಳಿಯ ಕರಡು ಕದನ ವಿರಾಮ ನಿರ್ಣಯವನ್ನು ಅಮೆರಿಕ ವೀಟೊ ಮಾಡಿದ್ದು ಇದು ಐದನೇ ಬಾರಿಯಾಗಿದೆ. ಕದನ ವಿರಾಮ ಬೇಡಿಕೆಯು ಹಮಾಸ್ ಹಿಡಿದಿಟ್ಟಿರುವ ಎಲ್ಲಾ ಒತ್ತೆಯಾಳುಗಳ ತಕ್ಷಣದ ಮತ್ತು ಬೇಷರತ್ತಾದ ಬಿಡುಗಡೆಗೆ ನೇರವಾಗಿ ಸಂಬಂಧಿಸಿಲ್ಲ ಎಂಬ ಆಧಾರದ ಮೇಲೆ ಬೈಡೆನ್ ಆಡಳಿತದ ಅಡಿಯಲ್ಲಿ ನವೆಂಬರ್‌ನಲ್ಲಿ ಕೂಡಾ ಅಮೆರಿಕ ಇದೇ ರೀತಿಯ ನಿರ್ಣಯವನ್ನು ವೀಟೊ ಮಾಡಿತು.

ನಿರ್ಣಯದ ಪಠ್ಯವನ್ನು ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ದಕ್ಷಿಣ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ಸೊಮಾಲಿಯಾ ಸಹ-ಪ್ರಾಯೋಜಿಸಿವೆ. ರಷ್ಯಾ, ಚೀನಾ, ಫ್ರಾನ್ಸ್ ಮತ್ತು ಯುಕೆ ಸಹ ನಿರ್ಣಯದ ಪರವಾಗಿ ಮತ ಚಲಾಯಿಸಿದವು.

“ನಮ್ಮಲ್ಲಿ ಹೆಚ್ಚಿನವರು ಒಂದೇ ದೃಷ್ಟಿಕೋನದಲ್ಲಿ ಒಮ್ಮುಖವಾಗುತ್ತಿರುವಂತೆ ತೋರುತ್ತಿದ್ದರೂ, ಮಂಡಳಿಯು ತನ್ನ ಜವಾಬ್ದಾರಿಯನ್ನು ಹೊರದಂತೆ ತಡೆಯಲಾಯಿತು” ಎಂದು ವಿಶ್ವಸಂಸ್ಥೆಯಲ್ಲಿನ ಫ್ರಾನ್ಸ್ ರಾಯಭಾರಿ ಜೆರೋಮ್ ಬೊನ್ನಾಫಾಂಟ್ ಹೇಳಿದ್ದಾರೆ.

“ಇಂದು, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಗಾಝಾ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ವೀಟೊ ಮಾಡುವ ಮೂಲಕ ಅಮೆರಿಕ ಬಲವಾದ ಸಂದೇಶವನ್ನು ಕಳುಹಿಸಿದೆ” ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮತದಾನದ ನಂತರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇಸ್ರೇಲ್ ಮತ್ತು ಹಮಾಸ್ ಸಮಾನ ಎಂದು ತಪ್ಪಾಗಿ ಪ್ರತಿಪಾದಿಸುವ ಅಥವಾ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ನಿರ್ಲಕ್ಷಿಸುವ ಯಾವುದೇ ಪಠ್ಯವನ್ನು ಅಮೆರಿಕ ಬೆಂಬಲಿಸುವುದಿಲ್ಲ. ಅಮೆರಿಕವು ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ನೊಂದಿಗೆ ನಿಲ್ಲುವುದನ್ನು ಮುಂದುವರಿಸುತ್ತದೆ.” ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ಕೂಡ ಅಮೆರಿಕದ ವೀಟೋವನ್ನು ಸ್ವಾಗತಿಸಿದೆ. “ಇಸ್ರೇಲ್‌ನೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ಏಕಪಕ್ಷೀಯ ನಿರ್ಣಯವನ್ನು ವೀಟೋ ಮಾಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಮತ್ತು ಆಡಳಿತಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಪ್ರಸ್ತಾವಿತ ನಿರ್ಣಯವು ಹಮಾಸ್ ಅನ್ನು ಬಲಪಡಿಸುತ್ತದೆ ಮತ್ತು ಒತ್ತೆಯಾಳು ಒಪ್ಪಂದವನ್ನು ಸಾಧಿಸುವ ಅಮೆರಿಕದ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ” ಎಂದು ಇಸ್ರೇಲ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಗಿಡಿಯಾನ್ ಸಾರ್ ಹೇಳಿದ್ದಾರೆ.

ಅದಾಗ್ಯೂ, ಯುನೈಟೆಡ್ ಕಿಂಗ್‌ಡಮ್‌(ಯುಕೆ) ಈ ನಿರ್ಣಯವನ್ನು ಬೆಂಬಲಿಸಿದ್ದು, ಅದರ ರಾಯಭಾರಿ ಬಾರ್ಬರಾ ವುಡ್‌ವರ್ಡ್ ಅವರು ಇಸ್ರೇಲ್‌ನ ಹೊಸ ನೆರವು ವ್ಯವಸ್ಥೆಯನ್ನು “ಅಮಾನವೀಯ” ಎಂದು ಕರೆದಿದ್ದಾರೆ. ಜೊತೆಗೆ, ಇಸ್ರೇಲ್ ಈಗಲೇ ನೆರವಿನ ಮೇಲಿನ ನಿರ್ಬಂಧಗಳನ್ನು ಕೊನೆಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.

“ಗಾಜಾದಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ವಿಸ್ತರಿಸುವ ಮತ್ತು ಸಹಾಯವನ್ನು ತೀವ್ರವಾಗಿ ನಿರ್ಬಂಧಿಸುವ ಇಸ್ರೇಲ್ ಸರ್ಕಾರದ ಈ ನಿರ್ಧಾರಗಳು ಅಸಮರ್ಥನೀಯ, ಅಸಮಾನ ಮತ್ತು ಪ್ರತಿಕೂಲವಾಗಿವೆ ಮತ್ತು ಯುಕೆ ಅವುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತದೆ.” ಎಂದು ಅವರು ಹೇಳಿದ್ದಾರೆ.

ಭದ್ರತಾ ಮಂಡಳಿಯ ಇತರ ಸದಸ್ಯರು ವೀಟೊ ಅಧಿಕಾರ ಚಲಾಯಿಸಿದ ಅಮೆರಿಕವನ್ನು ಟೀಕಿಸಿದ್ದಾರೆ. “ವಿಫಲವಾದ ಈ ನಿರ್ಣಯವು ಮಂಡಳಿಯ ಆತ್ಮಸಾಕ್ಷಿಯ ಮೇಲೆ ನೈತಿಕ ಕಳಂಕವಾಗಿ ಉಳಿಯುವುದಲ್ಲದೆ, ತಲೆಮಾರುಗಳವರೆಗೆ ಪ್ರತಿಧ್ವನಿಸುವ ರಾಜಕೀಯ ಅನ್ವಯದ ಅದೃಷ್ಟದ ಕ್ಷಣವಾಗಿ ಉಳಿಯುತ್ತದೆ” ಎಂದು ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಹೇಳಿದ್ದಾರೆ.

ವಿಶ್ವಸಂಸ್ಥೆಗೆ ಚೀನಾದ ರಾಯಭಾರಿ ಫು ಕಾಂಗ್ ಪ್ರತಿಕ್ರಿಯಿಸಿ, “ಇಂದಿನ ಮತದಾನದ ಫಲಿತಾಂಶವು, ಮತ್ತೊಮ್ಮೆ ಗಾಝಾದಲ್ಲಿನ ಸಂಘರ್ಷವನ್ನು ಶಮನಗೊಳಿಸಲು ಮಂಡಳಿಯ ಅಸಮರ್ಥತೆಗೆ ಮೂಲ ಕಾರಣ ಅಮೆರಿಕದ ಪುನರಾವರ್ತಿತ ಅಡಚಣೆಯಾಗಿದೆ ಎಂದು ಬಹಿರಂಗಪಡಿಸುತ್ತದೆ.” ಎಂದು ಹೇಳಿದ್ದಾರೆ.

ಸಹಾಯದ ಮೇಲಿನ ದೀರ್ಘಾವಧಿಯ ನಿರ್ಬಂಧ ಮತ್ತು ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ಎಂಬ ಯೋಜನೆಯ ಅಸ್ತವ್ಯಸ್ತ ಅನುಷ್ಠಾನದ ನಂತರ ಗಾಝಾದಲ್ಲಿ ಕ್ಷಾಮದ ಪರಿಸ್ಥಿತಿ ಉಂಟಾಗಿತ್ತು. ಈ ಬಗ್ಗೆ ವಿಶ್ವಸಂಸ್ಥೆ ಮತ್ತು ನೆರವು ಸಂಸ್ಥೆಗಳು ಎಚ್ಚರಿಕೆ ನೀಡಿದ್ದರಿಂದ ಈ ನಿರ್ಣಯವನ್ನು ಮತಕ್ಕೆ ಹಾಕಲಾಯಿತು.

“ಭಯಭೀತರಾಗುವ, ಗಾಯಗೊಳ್ಳುವ ಅಥವಾ ಗಾಜಾದಲ್ಲಿ ತಿನ್ನಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಡುವ ಪ್ಯಾಲೆಸ್ತೀನಿಯನ್ನರ ಭಯಾನಕ ದೃಶ್ಯಗಳನ್ನು ಜಗತ್ತು ದಿನದಿಂದ ದಿನಕ್ಕೆ ನೋಡುತ್ತಿದೆ” ಎಂದು ವಿಶ್ವಸಂಸ್ಥೆಯ ಪರಿಹಾರ ಮುಖ್ಯಸ್ಥ ಟಾಮ್ ಫ್ಲೆಚರ್ ಬುಧವಾರ ಹೇಳಿದ್ದಾರೆ.

ಅಸ್ಪಷ್ಟ ರಾಜಕೀಯ ಬೆಂಬಲ ಮತ್ತು ಹಣವನ್ನು ಹೊಂದಿರುವ ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ಗುರುವಾರ ಬೆಳಿಗ್ಗೆ ಎರಡನೇ ದಿನವೂ ಗಾಝಾದಲ್ಲಿ ತನ್ನ ವಿತರಣಾ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಘೋಷಿಸಿದೆ. ಅದರ ವಿತರಣಾ ಕೇಂದ್ರದಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದಾಗ ಇಸ್ರೇಲಿ ಗುಂಡಿನ ದಾಳಿಯಿಂದ ಮಂಗಳವಾರ ಕನಿಷ್ಠ 27 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ಈ ಘಟನೆಗಳ ಬಗ್ಗೆ ತಕ್ಷಣದ ಮತ್ತು ಸ್ವತಂತ್ರ ತನಿಖೆ ನಡೆಸಿ ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬ ವಿಶ್ವಸಂಸ್ಥೆಯ ಕರೆಗೆ ವಿಶ್ವಸಂಸ್ಥೆಗೆ ಯುಕೆ ಖಾಯಂ ಪ್ರತಿನಿಧಿ ವುಡ್‌ವರ್ಡ್ ಬೆಂಬಲ ವ್ಯಕ್ತಪಡಿಸಿದ್ದಾರೆ. “ಇಸ್ರೇಲ್ ಈಗ ನೆರವಿನ ಮೇಲಿನ ತನ್ನ ನಿರ್ಬಂಧಗಳನ್ನು ಕೊನೆಗೊಳಿಸಬೇಕಾಗಿದೆ. ಜೀವಗಳನ್ನು ಉಳಿಸಲು, ದುಃಖವನ್ನು ಕಡಿಮೆ ಮಾಡಲು ಮತ್ತು ನಿರ್ವಹಿಸಲು ವಿಶ್ವಸಂಸ್ಥೆ ಮತ್ತು ಮಾನವೀಯತೆಯಿಳ್ಳವರು ತಮ್ಮ ಕೆಲಸವನ್ನು ಮಾಡಲಿ. ಅದು ಗೌರವ,” ಎಂದು ಅವರು ಹೇಳಿದ್ದಾರೆ. ಬೇಷರತ್‌ ಗಾಝಾ ಕದನ ವಿರಾಮ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಚಿತ ಪಾಸ್‌ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?

ಉಚಿತ ಪಾಸ್‌ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...